ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಸಾಣೇಹಳ್ಳಿ ಸ್ವಾಮೀಜಿ ಪಾರು

Last Updated 2 ಫೆಬ್ರುವರಿ 2019, 19:26 IST
ಅಕ್ಷರ ಗಾತ್ರ

ಚಿತ್ರದುರ್ಗ:ಹೊಳಲ್ಕೆರೆ ತಾಲ್ಲೂಕಿನ ಸಾಸಲು ಗ್ರಾಮದ ಬಳಿ ಹೊಸದುರ್ಗದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಂಚರಿಸುತ್ತಿದ್ದ ಕಾರಿಗೆಶನಿವಾರ ಲಾರಿ ಡಿಕ್ಕಿ ಹೊಡೆದಿದೆ. ಕೂದಲೆಳೆ ಅಂತರದಿಂದ ಸ್ವಾಮೀಜಿ ಪಾರಾಗಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿ, ಸಂಪೂರ್ಣ ಜಖಂಗೊಂಡಿದೆ. ಲಾರಿ ಪಲ್ಟಿಯಾಗಿದ್ದು, ಅಪಘಾತ ಭೀಕರವಾಗಿದೆ. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

‘ಲಾರಿ, ಕಾರಿಗೆ ಡಿಕ್ಕಿ ಹೊಡೆದಿದ್ದು ಹೇಗೆ ಎಂಬುದು ಗೊತ್ತಾಗಲಿಲ್ಲ. ಕೆಳಗೆ ಇಳಿದು ನೋಡಿದಾಗ ಸೇತುವೆ ಮೇಲೆ ಲಾರಿ ಪಲ್ಟಿಯಾಗಿ ಬಿದ್ದಿತ್ತು. ಮೊದಲು ಅದರ ಚಾಲಕನಿಗೆ ಏನಾಗಿದೆ ನೋಡಿ ಎಂದು ಜನರಿಗೆ ಹೇಳಿದೆ. ಆದರೆ, ಆತ ಅಲ್ಲಿ ಕಾಣಲಿಲ್ಲ. ತಡೆಗೋಡೆ ಇದ್ದ ಕಾರಣ ಲಾರಿ ಕೆಳಗೆ ಬೀಳಲಿಲ್ಲ’ ಎಂದು ಸ್ವಾಮೀಜಿ ತಿಳಿಸಿದ್ದಾರೆ.

‘ಕಾರಿನ ಹಿಂಬದಿಯಲ್ಲಿ ಕುಳಿತಿದ್ದರೂ ಸೀಲ್ಟ್‌ ಬೆಲ್ಟ್ ಹಾಕಿಕೊಂಡಿದ್ದರಿಂದಲೇ ಅಪಘಾತದಿಂದ ಪಾರಾದೆ’ ಎಂದು ಅವರು ತಿಳಿಸಿದ್ದಾರೆ.

ಕಾರಿನ ಹಿಂಬದಿಯಲ್ಲಿ ಕುಳಿತಿದ್ದರೂ ಸೀಲ್ಟ್‌ ಬೆಲ್ಟ್ ಹಾಕಿಕೊಂಡಿದ್ದರಿಂದಲೇ ಅಪಘಾತದಿಂದ ಪಾರಾದೆ.
ಪಂಡಿತಾರಾಧ್ಯ ಸ್ವಾಮೀಜಿ
ಸಾಣೇಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT