‘ಸುಷ್ಮಿತಾ ಹಾಗೂ ಚೈತನ್ಯಾ ಶನಿವಾರ ನಸುಕಿನಲ್ಲಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆಯತ್ತ ತೆರಳುತ್ತಿದ್ದರು. ಚೈತನ್ಯಾ ಸ್ಕೂಟಿ ಚಲಾಯಿಸುತ್ತಿದ್ದರು. ಹಿಂಬದಿಯಲ್ಲಿ ಸುಷ್ಮಿತಾ ಕುಳಿತುಕೊಂಡಿದ್ದರು.ನ್ಯೂ ಲೈಟ್ ವೃತ್ತದ ಬಳಿ ನಿಯಂತ್ರಣ ತಪ್ಪಿದ್ದ ಸ್ಕೂಟಿ, ರಸ್ತೆಯಲ್ಲೇ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡ ಇಬ್ಬರೂ ರಸ್ತೆಯಲ್ಲೇ ನರಳುತ್ತ ಬಿದ್ದಿದ್ದರು. ಸ್ಥಳೀಯರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ಕೆ.ಆರ್.ಪುರ ಸಂಚಾರ ಪೊಲೀಸರು ತಿಳಿಸಿದರು.