<p><strong>ಬೆಂಗಳೂರು:</strong> ಕೆ.ಆರ್.ಪುರ ಸಮೀಪದ ನ್ಯೂ ಲೈಟ್ ವೃತ್ತದ ಬಳಿ ಸ್ಕೂಟಿ ಉರುಳಿಬಿದ್ದಿದ್ದರಿಂದ, ಸಾಫ್ಟ್ವೇರ್ ಎಂಜಿನಿಯರ್ ಸುಷ್ಮಿತಾ (25) ಎಂಬುವರು ಮೃತಪಟ್ಟಿದ್ದಾರೆ.</p>.<p>ಕೇರಳದ ಕಾಞಂಗಾಡ್ನ ಸುಷ್ಮಿತಾ ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೊಡ್ಡನೆಕ್ಕುಂದಿಯಲ್ಲಿ ವಾಸವಿದ್ದರು. ಅವಘಡದಲ್ಲಿ ಸಹೋದ್ಯೋಗಿರಾಮಮೂರ್ತಿನಗರದ ಚೈತನ್ಯಾ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ಸುಷ್ಮಿತಾ ಹಾಗೂ ಚೈತನ್ಯಾ ಶನಿವಾರ ನಸುಕಿನಲ್ಲಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆಯತ್ತ ತೆರಳುತ್ತಿದ್ದರು. ಚೈತನ್ಯಾ ಸ್ಕೂಟಿ ಚಲಾಯಿಸುತ್ತಿದ್ದರು. ಹಿಂಬದಿಯಲ್ಲಿ ಸುಷ್ಮಿತಾ ಕುಳಿತುಕೊಂಡಿದ್ದರು.ನ್ಯೂ ಲೈಟ್ ವೃತ್ತದ ಬಳಿ ನಿಯಂತ್ರಣ ತಪ್ಪಿದ್ದ ಸ್ಕೂಟಿ, ರಸ್ತೆಯಲ್ಲೇ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡ ಇಬ್ಬರೂ ರಸ್ತೆಯಲ್ಲೇ ನರಳುತ್ತ ಬಿದ್ದಿದ್ದರು. ಸ್ಥಳೀಯರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ಕೆ.ಆರ್.ಪುರ ಸಂಚಾರ ಪೊಲೀಸರು ತಿಳಿಸಿದರು.</p>.<p>‘ಚಿಕಿತ್ಸೆಗೆ ಸ್ಪಂದಿಸದೇ ಸುಷ್ಮಿತಾ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆ.ಆರ್.ಪುರ ಸಮೀಪದ ನ್ಯೂ ಲೈಟ್ ವೃತ್ತದ ಬಳಿ ಸ್ಕೂಟಿ ಉರುಳಿಬಿದ್ದಿದ್ದರಿಂದ, ಸಾಫ್ಟ್ವೇರ್ ಎಂಜಿನಿಯರ್ ಸುಷ್ಮಿತಾ (25) ಎಂಬುವರು ಮೃತಪಟ್ಟಿದ್ದಾರೆ.</p>.<p>ಕೇರಳದ ಕಾಞಂಗಾಡ್ನ ಸುಷ್ಮಿತಾ ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೊಡ್ಡನೆಕ್ಕುಂದಿಯಲ್ಲಿ ವಾಸವಿದ್ದರು. ಅವಘಡದಲ್ಲಿ ಸಹೋದ್ಯೋಗಿರಾಮಮೂರ್ತಿನಗರದ ಚೈತನ್ಯಾ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ಸುಷ್ಮಿತಾ ಹಾಗೂ ಚೈತನ್ಯಾ ಶನಿವಾರ ನಸುಕಿನಲ್ಲಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆಯತ್ತ ತೆರಳುತ್ತಿದ್ದರು. ಚೈತನ್ಯಾ ಸ್ಕೂಟಿ ಚಲಾಯಿಸುತ್ತಿದ್ದರು. ಹಿಂಬದಿಯಲ್ಲಿ ಸುಷ್ಮಿತಾ ಕುಳಿತುಕೊಂಡಿದ್ದರು.ನ್ಯೂ ಲೈಟ್ ವೃತ್ತದ ಬಳಿ ನಿಯಂತ್ರಣ ತಪ್ಪಿದ್ದ ಸ್ಕೂಟಿ, ರಸ್ತೆಯಲ್ಲೇ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡ ಇಬ್ಬರೂ ರಸ್ತೆಯಲ್ಲೇ ನರಳುತ್ತ ಬಿದ್ದಿದ್ದರು. ಸ್ಥಳೀಯರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ಕೆ.ಆರ್.ಪುರ ಸಂಚಾರ ಪೊಲೀಸರು ತಿಳಿಸಿದರು.</p>.<p>‘ಚಿಕಿತ್ಸೆಗೆ ಸ್ಪಂದಿಸದೇ ಸುಷ್ಮಿತಾ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>