ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ: ಇಬ್ಬರ ಸಾವು

ಶಿರಾ: ಶಿರಾ–ತುಮಕೂರು ರಾಷ್ಟ್ರೀಯ ಹೆದ್ದಾರಿ 48ರ ಮಾನಂಗಿ ಗೇಟ್ ಬಳಿ ಗುರುವಾರ ಬೆಳಿಗ್ಗೆ ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕ್ಯಾಂಟರ್ ಲಾರಿ ಚಾಲಕ ಹುನಗುಂದದ ರಮೇಶ್ (45), ಬಸವನ ಬಾಗೇವಾಡಿ ಗ್ರಾಮದ ರೈತ ಶ್ರೀಕಾಂತ್ (45) ಎಂದು ಗುರುತಿಸಲಾಗಿದೆ.
ಬಸವನ ಬಾಗೇವಾಡಿ ಗ್ರಾಮದ ರೈತರಾದ ಶ್ರೀಕಾಂತ್ ಅವರು ಕ್ಯಾಂಟರ್ ವಾಹನವನ್ನು ಬಾಡಿಗೆಗೆ ಪಡೆದುಕೊಂಡು ತಾವು ಬೆಳೆದಿರುವ ಈರುಳ್ಳಿಯನ್ನು ಮಾರಾಟ ಮಾಡಲು ಬೆಂಗಳೂರಿನ ಮಾರ್ಕೆಟ್ಗೆ ಬರುತ್ತಿದ್ದರು. ಮಾನಂಗಿ ಗೇಟ್ ಹತ್ತಿರ ಕೆಟ್ಟು ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಲಾರಿ ಕ್ಲೀನರ್ ಶ್ರೀನಿವಾಸ್ (20) ತೀವ್ರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.