ನವದೆಹಲಿ: ಮಾಹಿತಿ ಆಯುಕ್ತ ಎಂ.ಶ್ರೀಧರ ಆಚಾರ್ಯುಲು ಅವರು ಮುಖ್ಯ ಮಾಹಿತಿ ಆಯುಕ್ತ ಆರ್.ಕೆ. ಮಾಥುರ್ ವಿರುದ್ಧ ತಮ್ಮ ನಿವೃತ್ತಿಗೆ ಒಂದು ದಿನ ಮೊದಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬ್ಯಾಂಕುಗಳಿಗೆ ಉದ್ದೇಶಪೂರ್ವಕವಾಗಿ ಸಾಲ ಬಾಕಿ ಉಳಿಸಿಕೊಂಡವರ ಹೆಸರು ಬಹಿರಂಗಪಡಿಸಬೇಕು ಎಂದು ಆರ್ಬಿಐಗೆ ತಾವು ಸೂಚಿಸಿದ್ದಕ್ಕೆ ಮಾಥುರ್ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.