‘ಹೊಸ ಗಾಂಧಿ ನಗರ ಕೆಳಸೇತುವೆ ಬಳಿ ಕರ್ತವ್ಯದಲ್ಲಿದ್ದಾಗ ಆ ದಾರಿಯಲ್ಲಿ ಹೊರಟಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಆರೋಗ್ಯ ಮೇಲ್ವಿಚಾರಕ ಬಸವರಾಜ ಎಸ್. ಡೊಳ್ಳಿನ ಅವರೊಂದಿಗೆ ಕಾನ್ಸ್ಟೆಬಲ್ ಮಾತಿನ ಚಕಮಕಿ ನಡೆಸಿದ್ದರು. ಲಾಠಿ ಬೀಸಿ ಕರ್ತವ್ಯದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದರು. ಹೀಗಾಗಿ, ಅವರ ವಿರುದ್ಧ ಕ್ರಮ ವಹಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.