ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಮೇಲ್ವಿಚಾರಕನ ಮೇಲೆ ದರ್ಪ ತೋರಿದ ಕಾನ್‌ಸ್ಟೆಬಲ್‌ ವಿರುದ್ಧ ಕ್ರಮ: ಆಯುಕ್ತ

Last Updated 30 ಮಾರ್ಚ್ 2020, 10:58 IST
ಅಕ್ಷರ ಗಾತ್ರ

ಬೆಳಗಾವಿ: ‘ತನ್ನ ಕರ್ತವ್ಯದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಕ್ಕೆ ಇಲ್ಲಿನ ಮಾಳಮಾರುತಿ ಠಾಣೆಯ ಕಾನ್‌ಸ್ಟೆಬಲ್‌ ಮಂಜುನಾಥ ಮಲ್ಲಸರ್ಜ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್‌ ತಿಳಿಸಿದ್ದಾರೆ.

‘ಹೊಸ ಗಾಂಧಿ ನಗರ ಕೆಳಸೇತುವೆ ಬಳಿ ಕರ್ತವ್ಯದಲ್ಲಿದ್ದಾಗ ಆ ದಾರಿಯಲ್ಲಿ ಹೊರಟಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಆರೋಗ್ಯ ಮೇಲ್ವಿಚಾರಕ ಬಸವರಾಜ ಎಸ್. ಡೊಳ್ಳಿನ ಅವರೊಂದಿಗೆ ಕಾನ್‌ಸ್ಟೆಬಲ್‌ ಮಾತಿನ ಚಕಮಕಿ ನಡೆಸಿದ್ದರು. ಲಾಠಿ ಬೀಸಿ ಕರ್ತವ್ಯದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದರು. ಹೀಗಾಗಿ, ಅವರ ವಿರುದ್ಧ ಕ್ರಮ ವಹಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಬಸವರಾಜ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆಸಿದ ಕಾನ್‌ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕೆಲಸದಿಂದ ದೂರ ಉಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಆರೋಗ್ಯ ಸಹಾಯಕರು ಹಾಗೂ ಮೇಲ್ವಿಚಾರಕರ ಸಂಘದವರು ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT