‘ಪ್ರಜಾವಾಣಿ’ಯಲ್ಲಿ ಗುರುವಾರ ಪ್ರಕಟಗೊಂಡ ‘ಕೇಳುತ್ತಿಲ್ಲ ಮಲೆ ಮಕ್ಕಳ ಅಳಲು’ ವರದಿಗೆ ಪ್ರತಿಕ್ರಿಯಿಸಿದ ಅವರು, ‘ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಜಮೀನನ್ನು ಸಾರ್ವಜನಿಕ ಉದ್ದೇಶಕ್ಕೆ ಬಳಸಲು ಕೆಲವೊಂದು ಮಾರ್ಗಸೂಚಿ ಗಳಿವೆ. ವಿದ್ಯುತ್ ಸಂಪರ್ಕ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಕಾನೂನಿನ ಚೌಕಟ್ಟಿನಲ್ಲಿ ಅವಕಾಶವಿದೆ. ಕಾಮಗಾರಿ ನಡೆಸುವ ಮೆಸ್ಕಾಂ, ಲೋಕೋ ಪಯೋಗಿ, ಪಂಚಾಯತ್ರಾಜ್ ಎಂಜಿನಿಯರಿಂಗ್, ಸಮಾಜ ಕಲ್ಯಾಣ ಇಲಾಖೆಗಳು ಅನ್ಲೈನ್ನಲ್ಲಿ ಅನುಮತಿ ಕೋರಿ ಅರ್ಜಿ ಸಲ್ಲಿಸಬೇಕು. ಆದರೆ, ಕುತ್ಲೂರಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿ ಈತನಕ ಬಂದಿಲ್ಲ’ ಎಂದು ಅವರು ತಿಳಿಸಿದ್ದಾರೆ.