‘ವಿಭಾಗ ಮಟ್ಟದಲ್ಲಿ ‘ಐ ಆ್ಯಮ್ ಫಾರ್ ವೈಲ್ಡ್ಲೈಫ್’ ಎಂಬ ನಿಧಿ ತೆರೆದು, ದಾನಿಗಳು ನೀಡುವ ಹಣವನ್ನು ಸಂಗ್ರಹಿಸಿ ಅರಣ್ಯ ವೀಕ್ಷಕರ ಅಭ್ಯುದಯಕ್ಕಾಗಿ ವಿನಿಯೋಗಿಸಲಾಗುವುದು. ಅವರ ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ವಿಪತ್ತು ಸಂದರ್ಭದಲ್ಲಿ ಬಳಸಿಕೊಳ್ಳಲು ಅವಕಾಶವಿದೆ’ ಎಂದು ಮಲೆಮಹದೇಶ್ವರ ವನ್ಯಧಾಮದ ಉಪಅರಣ್ಯ ಸಂರಕ್ಷಣಧಿಕಾರಿವಿ.ಏಡುಕುಂಡಲು ತಿಳಿಸಿದ್ದಾರೆ.