ಬೆಂಗಳೂರು: ರಾಜ್ಯ ಪೊಲೀಸ್ ವಸತಿ ನಿಗಮದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿಜಿಪಿ ಎಚ್.ಸಿ. ಕಿಶೋರ್ ಚಂದ್ರ ಶುಕ್ರವಾರ ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ರಾಘವೇಂದ್ರ ಔರಾದಕರ ಅವರನ್ನು ನೇಮಕ ಮಾಡಲಾಗಿದೆ.
ಪೊಲೀಸ್ ನೇಮಕಾತಿ ಹಾಗೂ ತರಬೇತಿ ವಿಭಾಗದ ಎಡಿಜಿಪಿ ಆಗಿದ್ದ ಔರಾದಕರ ಅವರಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ಸಂಜೆಯಿಂದಲೇ ಜಾರಿಗೆ ಬರುವಂತೆ ಅವರಿಗೆ ರಾಜ್ಯ ಪೊಲೀಸ್ ವಸತಿ ನಿಗಮದ ಅಧ್ಯಕ್ಷ ಹುದ್ದೆ ನೀಡಲಾಗಿದೆ.