ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಯಲಹಂಕ ಶಾಖೆಯ ಆಶ್ರಯದಲ್ಲಿ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸತ್ಸಂಗ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ನಮ್ಮ ಮನಸ್ಸನ್ನು ಕೇಂದ್ರೀಕರಿಸಿ ಸಹಬಾಳ್ವೆಯಿಂದ ಬದುಕಬೇಕಾದರೆ ಅಂತಃಕರಣ ಶುದ್ಧವಾಗಿರಬೇಕು. ಈ ದಿಸೆಯಲ್ಲಿ ನಮ್ಮ ಮನಸ್ಸಿನಲ್ಲಿರುವ ಅಂಧಕಾರವನ್ನು ನಾವೇ ಹೋಗಲಾಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.