<p><strong>ಯಲಹಂಕ</strong>: ‘ಮನಸ್ಸನ್ನು ಶುದ್ಧಿಗೊಳಿಸಿಕೊಂಡ ವ್ಯಕ್ತಿಯು ಸರ್ವಕಾಲದಲ್ಲೂ ಆನಂದವನ್ನು ಪಡೆಯುತ್ತಾನೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ತಮ್ಮ ಅಂತರಂಗವನ್ನು ಶುದ್ಧಿಗೊಳಿಸಿಕೊಳ್ಳಬೇಕು’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಯಲಹಂಕ ಶಾಖೆಯ ಆಶ್ರಯದಲ್ಲಿ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸತ್ಸಂಗ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ನಮ್ಮ ಮನಸ್ಸನ್ನು ಕೇಂದ್ರೀಕರಿಸಿ ಸಹಬಾಳ್ವೆಯಿಂದ ಬದುಕಬೇಕಾದರೆ ಅಂತಃಕರಣ ಶುದ್ಧವಾಗಿರಬೇಕು. ಈ ದಿಸೆಯಲ್ಲಿ ನಮ್ಮ ಮನಸ್ಸಿನಲ್ಲಿರುವ ಅಂಧಕಾರವನ್ನು ನಾವೇ ಹೋಗಲಾಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.</p>.<p>ಅಂತಃಕರಣದಲ್ಲಿರುವ ಕೊಳೆಯನ್ನು ಮತ್ತು ಅಂಧಕಾರವನ್ನು ಹೋಗಲಾಡಿಸಲು ನಮ್ಮ ಹಿರಿಯರು ಕೊಟ್ಟ ಸಾಧನವೇ ಸತ್ಸಂಗ. ಈ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮೊಳಗಿರುವ ದುಃಖ ಮತ್ತು ಅಶುದ್ಧತೆಗಳನ್ನು ದೂರ ಮಾಡಬೇಕು ಎಂದು ತಿಳಿಸಿದರು.</p>.<p>ಇದಕ್ಕೂ ಮುನ್ನ ಸಂತೆ ವೃತ್ತದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ನಿರ್ಮಲಾನಂದನಾಥ ಸ್ವಾಮೀಜಿಯವರು ಮಾಲಾರ್ಪಣೆ ಮಾಡಿದರು. ನಂತರ ಅವರನ್ನು ರಥದಲ್ಲಿ ಮೆರವಣಿಗೆ ಮೂಲಕ ಕಾರ್ಯಕ್ರಮದ ವೇದಿಕೆಯವರೆಗೆ ಕರೆತರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ‘ಮನಸ್ಸನ್ನು ಶುದ್ಧಿಗೊಳಿಸಿಕೊಂಡ ವ್ಯಕ್ತಿಯು ಸರ್ವಕಾಲದಲ್ಲೂ ಆನಂದವನ್ನು ಪಡೆಯುತ್ತಾನೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ತಮ್ಮ ಅಂತರಂಗವನ್ನು ಶುದ್ಧಿಗೊಳಿಸಿಕೊಳ್ಳಬೇಕು’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಯಲಹಂಕ ಶಾಖೆಯ ಆಶ್ರಯದಲ್ಲಿ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸತ್ಸಂಗ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ನಮ್ಮ ಮನಸ್ಸನ್ನು ಕೇಂದ್ರೀಕರಿಸಿ ಸಹಬಾಳ್ವೆಯಿಂದ ಬದುಕಬೇಕಾದರೆ ಅಂತಃಕರಣ ಶುದ್ಧವಾಗಿರಬೇಕು. ಈ ದಿಸೆಯಲ್ಲಿ ನಮ್ಮ ಮನಸ್ಸಿನಲ್ಲಿರುವ ಅಂಧಕಾರವನ್ನು ನಾವೇ ಹೋಗಲಾಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.</p>.<p>ಅಂತಃಕರಣದಲ್ಲಿರುವ ಕೊಳೆಯನ್ನು ಮತ್ತು ಅಂಧಕಾರವನ್ನು ಹೋಗಲಾಡಿಸಲು ನಮ್ಮ ಹಿರಿಯರು ಕೊಟ್ಟ ಸಾಧನವೇ ಸತ್ಸಂಗ. ಈ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮೊಳಗಿರುವ ದುಃಖ ಮತ್ತು ಅಶುದ್ಧತೆಗಳನ್ನು ದೂರ ಮಾಡಬೇಕು ಎಂದು ತಿಳಿಸಿದರು.</p>.<p>ಇದಕ್ಕೂ ಮುನ್ನ ಸಂತೆ ವೃತ್ತದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ನಿರ್ಮಲಾನಂದನಾಥ ಸ್ವಾಮೀಜಿಯವರು ಮಾಲಾರ್ಪಣೆ ಮಾಡಿದರು. ನಂತರ ಅವರನ್ನು ರಥದಲ್ಲಿ ಮೆರವಣಿಗೆ ಮೂಲಕ ಕಾರ್ಯಕ್ರಮದ ವೇದಿಕೆಯವರೆಗೆ ಕರೆತರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>