ಕಸ್ಟಡಿ ಅವಧಿ ಮುಗಿದ ಕಾರಣದಿಂದ ಆರೋಪಿಯನ್ನು ಶನಿವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಯನ್ನು ಮತ್ತೆ ವಶಕ್ಕೆ ನೀಡುವಂತೆ ಪೊಲೀಸರು ಅರ್ಜಿ ಸಲ್ಲಿಸಲಿಲ್ಲ. ಆದಿತ್ಯ ರಾವ್ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶ ಕಿಶೋರ್ ಕುಮಾರ್ ಕೆ.ಎನ್. ಆದೇಶ ಹೊರಡಿಸಿದರು.