ಈ ಕುರಿತು ಫೇಸ್ಬುಕ್ನಲ್ಲಿ ವಿಡಿಯೋ ಶೇರ್ ಮಾಡಿರುವ ಅವರು, ರಾಜ್ಯದ ಎಸ್ಎಸ್ಎಲ್ಸಿ ಪರೀಕ್ಷೆಗಳು ಇಂದು ಆರಂಭವಾಗಬೇಕಿತ್ತು. ರಾಜ್ಯದ ಸುಮಾರು ಎಂಟೂವರೆ ಲಕ್ಷ ವಿದ್ಯಾರ್ಥಿಗಳು ತಯಾರಿ ನಡೆಸಿದ್ದರು. ಕಾರಣಾಂತರಗಳಿಂದ ಪರೀಕ್ಷೆಗಳನ್ನೆಲ್ಲ ಮುಂದೂಡಲಾಗಿದೆ. ಪಿಯುಸಿಯ ಕೊನೆಯ ಇಂಗ್ಲಿಷ್ ಪರೀಕ್ಷೆಯನ್ನು ಮುಂದೂಡಲಾಗಿದೆ. 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಎಸ್ಎಸ್ಎಲ್ಪರೀಕ್ಷೆಯೇ ಜೀವನವಲ್ಲ ಎಂದು ವಿದ್ಯಾರ್ಥಿಗಳಿಗೆ ಹೇಳುತ್ತಿರುತ್ತೇನೆ. ಜೀವನದಲ್ಲಿ ಅನೇಕ ಪರೀಕ್ಷೆಗಳು ಬರುತ್ತವೆ. ಅದರಲ್ಲಿ ಇಡೀ ಜಗತ್ತಿಗೆ ಬಂದಿರುವ ಕೊರೊನಾ ಪರೀಕ್ಷೆಯನ್ನು ಕೂಡ ಎದುರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.