<p><strong>ಮಂಗಳೂರು: </strong>ನಗರದಲ್ಲಿ ಶನಿವಾರ ಮಧ್ನಾಹ್ನದ ಬಳಿಕ ಕರ್ಪ್ಯೂ ಸಡಿಲಿಕೆಯ ಬಳಿಕ ಜನಜೀವನ ಸ್ವಲ್ಪಮಟ್ಟಿಗೆ ಸಹಜ ಸ್ಥಿತಿಗೆ ಮರಳುವಂತಾಯಿತು. ಶನಿವಾರ ಮಧಾಹ್ನ3 ರಿಂದ ಸಂಜೆ 6 ಗಂಟೆ<br />ಯವರೆಗೆ ಕರ್ಪ್ಯೂ ಸಡಿಲಿಕೆ ಮಾಡಿದ್ದರಿಂದ ತರಕಾರಿ, ಹಾಲು, ದಿನಸಿ ಅಂಗಡಿಗಳು ತೆರೆದಿದ್ದವು. ಜನರು ಅಗತ್ಯ ವಸ್ತುಗಳಿಗಾಗಿ ಅಂಗಡಿಗಳಿಗೆ ಮುಗಿಬಿದ್ದು ಖರೀದಿಸುವ ದೃಶ್ಯ ಸಾಮಾನ್ಯವಾಗಿತ್ತು.</p>.<p>ಬೆಳಿಗ್ಗೆ ನಗರದ ಕಾವೂರು, ಬಂಟ್ಸ್ ಹಾಸ್ಟೆಲ್, ಲೇಡಿಹಿಲ್ ವೃತ್ತಗಳಲ್ಲಿ ಗುಂಪಾಗಿ ಸಂಚರಿಸುತ್ತಿದ್ದ ಜನರನ್ನು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ, ಚದುರಿಸಿದರು. ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿತ್ತು. ಆದರೆ, ಅದರ ಮಾಹಿತಿ ಇಲ್ಲದೇ, ಜನರು ಪರದಾಡಿದರು. 8 ಗಂಟೆಯಾಗುತ್ತಲೇ, ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸಿದರು.</p>.<p>ನಿಧಾನವಾಗಿ ವ್ಯಾಪಾರ, ವಹಿವಾಟು ಸಹಜ ಸ್ಥಿತಿಗೆ ಮರಳುತ್ತಿದ್ದು, ಶನಿವಾರ ಮಧ್ಯಾಹ್ನ ಹಲವಾರು ವಾಹನಗಳು ರಸ್ತೆಗೆ ಇಳಿದಿದ್ದವು. ಮತ್ತೆ ಸಂಜೆ ಆರು ಗಂಟೆಯ ನಂತರ ರಸ್ತೆಗಳು ಬಿಕೋ ಎನ್ನುತ್ತಿದ್ದವು. ನಗರದಲ್ಲಿ ಶನಿವಾರವೂ ಬಿಗಿ ಬಂದೋಬಸ್ತ್ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ನಗರದಲ್ಲಿ ಶನಿವಾರ ಮಧ್ನಾಹ್ನದ ಬಳಿಕ ಕರ್ಪ್ಯೂ ಸಡಿಲಿಕೆಯ ಬಳಿಕ ಜನಜೀವನ ಸ್ವಲ್ಪಮಟ್ಟಿಗೆ ಸಹಜ ಸ್ಥಿತಿಗೆ ಮರಳುವಂತಾಯಿತು. ಶನಿವಾರ ಮಧಾಹ್ನ3 ರಿಂದ ಸಂಜೆ 6 ಗಂಟೆ<br />ಯವರೆಗೆ ಕರ್ಪ್ಯೂ ಸಡಿಲಿಕೆ ಮಾಡಿದ್ದರಿಂದ ತರಕಾರಿ, ಹಾಲು, ದಿನಸಿ ಅಂಗಡಿಗಳು ತೆರೆದಿದ್ದವು. ಜನರು ಅಗತ್ಯ ವಸ್ತುಗಳಿಗಾಗಿ ಅಂಗಡಿಗಳಿಗೆ ಮುಗಿಬಿದ್ದು ಖರೀದಿಸುವ ದೃಶ್ಯ ಸಾಮಾನ್ಯವಾಗಿತ್ತು.</p>.<p>ಬೆಳಿಗ್ಗೆ ನಗರದ ಕಾವೂರು, ಬಂಟ್ಸ್ ಹಾಸ್ಟೆಲ್, ಲೇಡಿಹಿಲ್ ವೃತ್ತಗಳಲ್ಲಿ ಗುಂಪಾಗಿ ಸಂಚರಿಸುತ್ತಿದ್ದ ಜನರನ್ನು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ, ಚದುರಿಸಿದರು. ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿತ್ತು. ಆದರೆ, ಅದರ ಮಾಹಿತಿ ಇಲ್ಲದೇ, ಜನರು ಪರದಾಡಿದರು. 8 ಗಂಟೆಯಾಗುತ್ತಲೇ, ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸಿದರು.</p>.<p>ನಿಧಾನವಾಗಿ ವ್ಯಾಪಾರ, ವಹಿವಾಟು ಸಹಜ ಸ್ಥಿತಿಗೆ ಮರಳುತ್ತಿದ್ದು, ಶನಿವಾರ ಮಧ್ಯಾಹ್ನ ಹಲವಾರು ವಾಹನಗಳು ರಸ್ತೆಗೆ ಇಳಿದಿದ್ದವು. ಮತ್ತೆ ಸಂಜೆ ಆರು ಗಂಟೆಯ ನಂತರ ರಸ್ತೆಗಳು ಬಿಕೋ ಎನ್ನುತ್ತಿದ್ದವು. ನಗರದಲ್ಲಿ ಶನಿವಾರವೂ ಬಿಗಿ ಬಂದೋಬಸ್ತ್ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>