<p><strong>ಹಾವೇರಿ:</strong> ಎಚ್.ಡಿ. ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪು ರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.</p>.<p>ಹಿರೇಕೆರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರಿಯಾಗಿ ಯೋಜನೆ ರೂಪಿಸದೇ ಕುಮಾರಸ್ವಾಮಿ ಬಾಯಿಗೆ ಬಂದಂತೆ ಸಾಲಮನ್ನಾ ಘೋಷಣೆ ಮಾಡಿ ಹೋಗಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರು ಮಾಡಿದ್ದಾರೆ. ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ ಎಂದರು.</p>.<p>ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಘೋಷಣೆ ಮಾಡಿ ಹೋಗುವುದಕ್ಕಿಂತ ನುಡಿದಂತೆ ನಡೆದುಕೊಳ್ಳುವುದು ಮುಖ್ಯ ಎಂದು ಹೇಳಿದರು.</p>.<p>ರೈತರ ಸಾಲಮನ್ನಾ ಮಾಡಲು ಹಂತ ಹಂತವಾಗಿ ದಾಖಲಾತಿ ಪರಿಶೀಲಿಸಲಾಗುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ ವಿರೋಧ ಪಕ್ಷ ಸ್ಥಾನದಲ್ಲಿದ್ದಾರೆ. ಹೀಗಾಗಿ ವಿರೋಧ ಮಾಡುವುದು ಅವರ ಆ ಜನ್ಮ ಸಿದ್ಧ ಹಕ್ಕು ಎಂದು ತಿಳಿದುಕೊಂಡಿದ್ದಾರೆ. ಇರುವ ಇತಿಮಿತಿಯ ಅನುದಾನದಲ್ಲಿಯೇ ಯಡಿಯೂರಪ್ಪನವರು ಸಮತೋಲನದ ಬಜೆಟ್ ನೀಡಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಕೃಷಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಎಚ್.ಡಿ. ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪು ರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.</p>.<p>ಹಿರೇಕೆರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರಿಯಾಗಿ ಯೋಜನೆ ರೂಪಿಸದೇ ಕುಮಾರಸ್ವಾಮಿ ಬಾಯಿಗೆ ಬಂದಂತೆ ಸಾಲಮನ್ನಾ ಘೋಷಣೆ ಮಾಡಿ ಹೋಗಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರು ಮಾಡಿದ್ದಾರೆ. ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ ಎಂದರು.</p>.<p>ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಘೋಷಣೆ ಮಾಡಿ ಹೋಗುವುದಕ್ಕಿಂತ ನುಡಿದಂತೆ ನಡೆದುಕೊಳ್ಳುವುದು ಮುಖ್ಯ ಎಂದು ಹೇಳಿದರು.</p>.<p>ರೈತರ ಸಾಲಮನ್ನಾ ಮಾಡಲು ಹಂತ ಹಂತವಾಗಿ ದಾಖಲಾತಿ ಪರಿಶೀಲಿಸಲಾಗುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ ವಿರೋಧ ಪಕ್ಷ ಸ್ಥಾನದಲ್ಲಿದ್ದಾರೆ. ಹೀಗಾಗಿ ವಿರೋಧ ಮಾಡುವುದು ಅವರ ಆ ಜನ್ಮ ಸಿದ್ಧ ಹಕ್ಕು ಎಂದು ತಿಳಿದುಕೊಂಡಿದ್ದಾರೆ. ಇರುವ ಇತಿಮಿತಿಯ ಅನುದಾನದಲ್ಲಿಯೇ ಯಡಿಯೂರಪ್ಪನವರು ಸಮತೋಲನದ ಬಜೆಟ್ ನೀಡಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಕೃಷಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>