ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗುಂಬೆ | ಮಳೆಗಾಲ ಮುಗಿಯುವವರೆಗೂ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

Last Updated 19 ಜೂನ್ 2020, 19:30 IST
ಅಕ್ಷರ ಗಾತ್ರ

ಉಡುಪಿ: ಮಳೆಗಾಲ ಮುಗಿಯುವವರೆಗೂ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ಆದೇಶ ಹೊರಡಿಸಿದ್ದಾರೆ.

ಆಗುಂಬೆ ಘಾಟಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಭಾರಿ ಸರಕು ಸಾಗಣೆ ವಾಹನಗಳು ಓಡಾಡಿದರೆ ಘಾಟಿಯ ಇಕ್ಕೆಲಗಳು ಕುಸಿಯುವ ಸಾಧ್ಯತೆಗಳಿವೆ. ಹಾಗಾಗಿ, 12 ಟನ್‌ಗಿಂತ ಹೆಚ್ಚಿನ ಭಾರದ ವಾಹನಗಳು ಸಂಚರಿಸುವಂತಿಲ್ಲ. ಅ.15ರವರೆಗೂ ನಿಷೇಧದ ಅವಧಿ ಇರಲಿದೆ ಎಂದು ತಿಳಿಸಿದ್ದಾರೆ.

ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳು ಉಡುಪಿ–ಬ್ರಹ್ಮಾವರ–ಬಾರ್ಕೂರು–ಶಂಕರನಾರಾಯಾಣ, ಸಿದ್ದಾಪುರ–ಹೊಸಂಗಡಿ–ಹುಲಿಕಲ್ ಘಾಟಿ–ಹೊಸನಗರ–ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬೇಕು. ಉಡುಪಿ–ಕಾರ್ಕಳ–ಬಜಗೋಳಿ–ಎಸ್‌ಕೆ ಬಾರ್ಡರ್–ಕೆರೆಕಟ್ಟೆ–ಶೃಂಗೇರಿ–ಶಿವಮೊಗ್ಗ ಮಾರ್ಗದಲ್ಲೂ ಸಂಚರಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT