ಪರಿಣಾಮ ತೀರ್ಥಹಳ್ಳಿಯಿಂದ ಆಗುಂಬೆ ಘಾಟಿ ಮಾರ್ಗವಾಗಿ ಹೆಬ್ರಿ ಉಡುಪಿಗೆ ಬರುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ನೀರಿನ ಹರಿವು ಕಡಿಮೆಯಾದ ಬಳಿಕ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ನಾಗರಾಜ್ ನಾಯಕ್ ‘ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.