ಬೆಂಗಳೂರು: ‘ಧರ್ಮನಿರಪೇಕ್ಷತೆ ಎಂದರೆ ಮುಸ್ಲಿಮರನ್ನು ಓಲೈಸುವ ಧೋರಣೆ ಎಂಬ ತಪ್ಪು ಅಭಿಪ್ರಾಯಗಳನ್ನು ಬಿತ್ತಲಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಯುವಜನತೆ ಜ್ಞಾನ ಸಂಪಾದನೆ ಮೂಲಕ ಭವಿಷ್ಯದ ಸವಾಲುಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ’ ಎಂದು ಎಸ್ಯುಸಿಐ (ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ–ಕಮ್ಯುನಿಸ್ಟ್ ಪಕ್ಷ) ಪಾಲಿಟ್ ಬ್ಯೂರೊ ಸದಸ್ಯ ಕೆ.ರಾಧಾಕೃಷ್ಣ ಅಭಿಪ್ರಾಯಪಟ್ಟರು.