ಸೋಮವಾರ ಸಂಜೆ ಹೆಲ್ತ್ ಬಿಡುಗಡೆ ಮಾಡಿದ ಆಸ್ಪತ್ರೆ ವೈದ್ಯರು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರು ಸಹ ಮಣಿಪಾಲಕ್ಕೆ ಬಂದಿದ್ದು ಶ್ರೀಗಳ ಚಿಕಿತ್ಸೆಗೆ ಅಗತ್ಯ ನೆರವು ನೀಡುತ್ತಿದ್ದಾರೆ. ಸ್ವಾಮೀಜಿಯ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದು, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.