ಬಾಲಾಜಿ ಹಾರ್ಟ್ಕೇರ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದ ಜೋಶಿ, ‘ಕೇಂದ್ರ ಸರ್ಕಾರ ರಾಜ್ಯಕ್ಕೆ ಮಂಜೂರು ಮಾಡಿರುವ ಏಮ್ಸ್ ಅನ್ನು ರಾಮನಗರದಲ್ಲಿ ಆರಂಭಿಸಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪತ್ರ ಬರೆದಿದ್ದಾರೆ. ಆದರೆ ಅದನ್ನು ಉತ್ತರ ಕರ್ನಾಟಕದಲ್ಲಿಯೇ ಆರಂಭಿಸಬೇಕು ಎಂದು ಸಂಸದರ ಸಭೆಯಲ್ಲಿಯೂ ನಾನು ಅಭಿಪ್ರಾಯ ವ್ಯಕ್ತಪಡಿಸಿದ್ದೆ’ ಎಂದರು.