ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯ್ನಾಡಿಗೆ ಬಂದಿಳಿದ ಲಂಡನ್‌ನಲ್ಲಿ ಸಿಲುಕಿದ್ದ 326 ಕನ್ನಡಿಗರು

Last Updated 11 ಮೇ 2020, 12:41 IST
ಅಕ್ಷರ ಗಾತ್ರ

ಬೆಂಗಳೂರು:ಲಂಡನ್‌ನಲ್ಲಿ ಸಿಲುಕಿರುವ 326ಕನ್ನಡಿಗರನ್ನು ಹೊತ್ತ ಮೊದಲ ಏರ್‌ ಇಂಡಿಯಾ ವಿಮಾನವು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಮುಂಜಾನೆ ಬಂದಿಳಿದಿದೆ.

ಈ ವಿಮಾನದಲ್ಲಿದ್ದ ಬಹುತೇಕ ಪ್ರಯಾಣಿಕರು ಅನಾರೋಗ್ಯ ಕಾರಣದಿಂದ ತುರ್ತಾಗಿ ತಾಯ್ನಾಡಿಗೆ ಮರಳುವವರಾಗಿದ್ದರು. ಅಂಥವರ ಪ್ರಯಾಣಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಸರ್ಕಾರದ ಮೂಲಗಳು ‘ಪ್ರಜಾವಾಣಿ’ ಗೆ ತಿಳಿಸಿದ್ದವು.

ಲಂಡನ್ ನಿಂದ ಸೋಮವಾರ ಬೆಂಗಳೂರಿಗೆ ಬಂದ 326ಪ್ರಯಾಣಿಕರ ಪೈಕಿ, ಯಾರಿಗೂ ಕೊರೊನಾ ಸೋಂಕು ತಗುಲಿರುವ ಲಕ್ಷಣಗಳಿಲ್ಲ ಎಂದು ವೈದ್ಯರು ಹೇಳಿದ್ದಾರೆ.

'ಮೂರು ತಿಂಗಳ ಗರ್ಭಿಣಿಯಾಗಿದ್ದ 27 ವರ್ಷದ ಮಹಿಳೆಯೊಬ್ಬರಿಗೆ ಗರ್ಭಪಾತವಾಗಿದೆ. ಅವರನ್ನು ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ, ಮಹಿಳೆ ಮತ್ತು ಅವರ ಪತಿಯನ್ನು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಡಾ. ಪ್ರಭುದೇವ ಗೌಡ ತಿಳಿಸಿದರು.

'ಆಸ್ಪತ್ರೆಯಲ್ಲಿ ಇಬ್ಬರನ್ನೂ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿದೆ' ಎಂದು ಹೇಳಿದರು.ಎರಡನೇ ವಿಮಾನ ಮೇ 12ರಂದು ಮಂಗಳೂರಿಗೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT