ಪೊನ್ನಂಪೇಟೆ: ಮೈಸೂರಿನಿಂದ ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿಯ ಐರಾವತ ಬಸ್ ಶುಕ್ರವಾರ ಮುಂಜಾನೆ ರಸ್ತೆ ಬದಿಯ ಹಳ್ಳಕ್ಕೆಉರುಳಿದೆ.
ಮುಂಜಾನೆ ಸಂಭವಿಸಿದ ಈ ಘಟನೆಯಲ್ಲಿಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಸ್ಥಳೀಯರು ಬಸ್ನಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ ಬೇರೊಂದು ವಾಹನದಲ್ಲಿ ಕೇರಳಕ್ಕೆ ಕಳುಹಿಸಿದ್ದಾರೆ.
ಬೆಳಗ್ಗಿನ ಜಾವ ದಟ್ಟವಾಗಿ ಮಂಜು ಕವಿದಿತ್ತು. ಸರಿಯಾಗಿ ರಸ್ತೆಯೂ ಕಾಣಿಸುತ್ತಿರಲಿಲ್ಲ. ರಸ್ತೆಯೂ ಕಿರಿದಾಗಿದ್ದು ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿದೆ.