ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಇನ್ನು ಮುಂದಿನ ಆಡಳಿತಾತ್ಮಕ ಕ್ರಮಗಳ ಬಗ್ಗೆ ಎಲ್ಲ ವಿಭಾಗ, ಇಲಾಖೆಗಳ ಮುಖಂಡರ ಜೊತೆ ವಿಸ್ತೃತವಾಗಿ ಚರ್ಚಿಸಲಾಗಿದೆ. ಪೊಲೀಸ್ ಇಲಾಖೆಯು ಸಾರ್ವಜನಿಕರ ಚಟುವಟಿಕೆಗಳ ಮೇಲೆ ಸ್ವಯಂ ಸೇವಕರು ಮತ್ತು ಟಾಸ್ಕ್ಫೋರ್ಸ್ಗಳ ನೆರವಿನೊಂದಿಗೆಗಮನವಿಡಲಿದೆ. ನಿಯಮದ ಉಲ್ಲಂಘನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು.