‘ನವೆಂಬರ್ 19ರಂದು ಬೆಳಗಾವಿಗೆ ಬರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಹೀಗಾಗಿ, ಪ್ರತಿಭಟನೆ ಕೈಬಿಡಲಾಗಿದೆ’ ಎಂದು ರೈತರು ತಿಳಿಸಿದ್ದರು. ‘ಆದರೆ, ಮುಖ್ಯಮಂತ್ರಿ ಮಾತು ತಪ್ಪಿದ್ದಾರೆ. ಅವರು ಬರುವ ಬದಲಿಗೆ, ನಮ್ಮನ್ನೇ ಬೆಂಗಳೂರಿಗೆ ಬರುವಂತೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ರೈತ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಹೀಗಾಗಿ, ಅವರು ಇಲ್ಲಿಗೆ ಬರುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ಮುಖಂಡರು ತಿಳಿಸಿದರು.