3 ಲಕ್ಷಕ್ಕೂ ಹೆಚ್ಚಿನ ಜನರು ಸಮ್ಮೇಳನಕ್ಕೆ ಬರುವ ನಿರೀಕ್ಷೆಯನ್ನು ಸಂಘಟಕರು ವ್ಯಕ್ತಪಡಿಸಿದ್ದು, ಈಗಾಗಲೇ 35 ಸಾವಿರ ಮಂದಿ ಸದಸ್ಯತ್ವಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಪ್ರಧಾನ ಸಾಹಿತ್ಯ ಗೋಷ್ಠಿ, ವಿಶೇಷೋಪನ್ಯಾಸ, ಕವಿ ಸಮಯ ಕವಿನಮನ, ಸಂಸ್ಮರಣೆ, ಸಾಂಸ್ಕೃತಿಕ ವೈಭವಗಳಿಗೆ ಆದ್ಯತೆ ನೀಡಲಾಗಿದೆ. ಇದರೊಂದಿಗೆ ವಿವಿಧ ಪ್ರದರ್ಶನ, ಜಾನಪದ ಕಲೆಗಳು, ಭಾಷಾ ವೈವಿಧ್ಯ ನುಡಿಸಿರಿಯ ಮುಖ್ಯ ಆಕರ್ಷಣೆ.