ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯದಿಂದ ಕಂಠೀರವ ಕ್ರೀಡಾಂಗಣದತ್ತ ಅಂಬರೀಷ್ ಪಾರ್ಥಿವ ಶರೀರ

Last Updated 26 ನವೆಂಬರ್ 2018, 5:54 IST
ಅಕ್ಷರ ಗಾತ್ರ

ಮಂಡ್ಯ: ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಷ್ ಅವರ ಪಾರ್ಥಿವ ಶರೀರವನ್ನು ಸೇನಾ ಹೆಲಿಕಾಪ್ಟರ್‌ ಮೂಲಕ ಏರ್‌ಲಿಫ್ಟ್‌ ಮಾಡಿ ಬೆಂಗಳೂರಿಗೆ ತರಲಾಗುತ್ತಿದೆ.

ಭಾನುವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 10:30ರ ರವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಏರ್‌ಲಿಫ್ಟ್‌ಗೂ ಮುನ್ನ ಅಂಬರೀಷ್‌ ಪುತ್ರ ಅಭಿಷೇಕ್‌ ಮೈದಾನದಲ್ಲಿ ನೆರೆದಿದ್ದ ಜನರಿಗೆ ಕೈಮುಗಿದು ಕೃತಜ್ಞತೆ ಅರ್ಪಿಸುತ್ತಿದ್ದಂತೆ ಜನರ ಕಣ್ಣಾಲಿಗಳಲ್ಲಿ ನೀರು ಜಿನುಗಿತು.

ಮೆರವಣಿಗೆಗೆ ಸಜ್ಜಾಗಿರುವ ವಾಹನ
ಮೆರವಣಿಗೆಗೆ ಸಜ್ಜಾಗಿರುವ ವಾಹನ

ಹೆಲಿಕಾಪ್ಟರ್‌ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದು, ಕಂಠೀರವ ಕ್ರೀಡಾಂಗಣಕ್ಕೆ ತರಲಾಗುತ್ತದೆ. ಕ್ರೀಡಾಂಗಣದಿಂದ ಕಂಠೀರವ ಸ್ಟುಡಿಯೊ ವರೆಗೂ ವಿಶೇಷವಾಗಿ ಸಿದ್ಧಪಡಿಸಲಾಗಿರುವ ವಾಹನದಲ್ಲಿ ಮೆರವಣಿಗೆ ಮೂಲಕ ಅಂತಿಮ ಯಾತ್ರೆ ನಡೆಯಲಿದೆ.

ಭದ್ರತೆಗೆ ನಿಯೋಜಿಸಲಾಗಿರುವ ರ‍್ಯಾಪಿಡ್‌ ಆ್ಯಕ್ಷನ್‌ ಫೋರ್ಸ್
ಭದ್ರತೆಗೆ ನಿಯೋಜಿಸಲಾಗಿರುವ ರ‍್ಯಾಪಿಡ್‌ ಆ್ಯಕ್ಷನ್‌ ಫೋರ್ಸ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT