ಅಂಬರೀಷ್ ಅಸ್ಥಿ ಸಂಚಯನ ಕಾರ್ಯ: ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ

ಬೆಂಗಳೂರು: ನಟ ಅಂಬರೀಷ್ ಅವರ ಅಸ್ಥಿ ಸಂಚಯನ ಕಾರ್ಯದ ಪೂಜಾ ವಿಧಿ ವಿಧಾನಗಳನ್ನು ಬುಧವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಕುಟುಂಬಸ್ಥರು ನೆರವೇರಿಸಿದರು.
ಅಂಬರೀಷ್ ಸಮಾಧಿಗೆ ಹಾಲು–ತುಪ್ಪ ಬಿಡುವ ಕಾರ್ಯವು ಇದೇ ವೇಳೆ ನಡೆಯಿತು. ಒಕ್ಕಲಿಗ ಸಂಪ್ರದಾಯದಂತೆ ಅಸ್ಥಿ ಸಂಚಯನ ಹಾಗೂ ಹಾಲು ತುಪ್ಪ ಬಿಡುವ ಕಾರ್ಯವನ್ನು ನೆರವೆರಿಸಲಾಯಿತು.
ಹಿರಿಯ ಜೋತಿಷಿ ಬಾನುಪ್ರಕಾಶ್ ಶರ್ಮಾ ಮಾರ್ಗದರ್ಶನದಲ್ಲಿ ಅಂಬರೀಷ್ ಅವರ ಪುತ್ರ ಅಭಿಷೇಕ್ ಗೌಡ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು. ಈ ವೇಳೆ ಸುಮಲತಾ ಉಪಸ್ಥಿತರಿದ್ದರು.
ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಅಭಿಷೇಕ್ ಗೌಡ ಮತ್ತು ಸುಮಲತಾ ಅಸ್ಥಿ ಸಂಚಯದ ಪೂಜಾ ಕಾರ್ಯಗಳನ್ನು ಪೂರೈಸಿದರು. 11.30ರ ಸುಮಾರಿಗೆ ಕುಟುಂಬಸ್ಥರು ಅಸ್ಥಿಯನ್ನು ಪಶ್ಚಿಮ ವಾಹಿನಿಯಲ್ಲಿ ವಿಸರ್ಜಿಸಲು ತೆರಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.