‘ಆಂಬಿಡೆಂಟ್ನಿಂದ ಪರಮೇಶ್ವರ್, ರೋಷನ್ ಬೇಗ್ ಹಣ ಪಡೆದಿರುವುದನ್ನು ತನಿಖೆ ವೇಳೆ ಸಿಸಿಬಿ ಮುಂದೆ ಕಂಪನಿಯ ಫರೀದ್ ಹೇಳಿಕೆ ನೀಡಿದ್ದಾರೆ ಎಂದು ನನಗೆ ಪೊಲೀಸರೇ ತಿಳಿಸಿದ್ದಾರೆ. ಆದರೆ ಸರ್ಕಾರ ಉಳಿಸಿಕೊಳ್ಳಲು ಅವರನ್ನು ಕುಮಾರಸ್ವಾಮಿ ರಕ್ಷಿಸುತ್ತಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿದರು.