ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

Last Updated 26 ನವೆಂಬರ್ 2018, 7:52 IST
ಅಕ್ಷರ ಗಾತ್ರ

ಬೆಂಗಳೂರು: ಅಂಬರೀಷ್ ಅವರ ಅಂತ್ಯಕ್ರಿಯೆ ವೀಕ್ಷಿಸಲು ಬಂದಿರುವ ಸಾವಿರಾರು ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕಂಠೀರವ ಸ್ಟುಡಿಯೊದ ಆಡಳಿತ ಕಚೇರಿಯ ಮುಂಭಾಗದಿಂದ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಗಣ್ಯರು, ನಟ, ನಟಿಯರು ತೆರಳಲು ಅವಕಾಶ ಕಲ್ಪಿಸಲಾಗಿದೆ. ಈ ಮಾರ್ಗದಲ್ಲಿಯೇ ಅಭಿಮಾನಿಗಳು ಮತ್ತು ಸಾರ್ವಜನಿಕರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಈ ಮಾರ್ಗವಾಗಿ ಚಿತ್ರರಂಗದ ನಟ, ನಟಿಯರು ತೆರಳುವಾಗ ಅಭಿಮಾನಿಗಳು ಜೈಕಾರ ಮೊಳಗಿಸುತ್ತಿದ್ದಾರೆ.

ನಟರಾದ ಶಿವರಾಜ್ ಕುಮಾರ್, ದುನಿಯಾ ವಿಜಯ್, ರಂಗಾಯಣ ರಘು, ಜೈಜಗದೀಶ್, ಚೇತನ್, ನಿರ್ದೇಶಕ ಎಸ್.ನಾರಾಯಣ್ ಸೇರಿದಂತೆ ಹಲವು‌ ಕಲಾವಿದರು ಈಗಾಗಲೇ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT