ರಾಜ್ಯದಲ್ಲಿ ಬಂಡವಾಳವನ್ನು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಲು ಸಹಾಯಕವಾಗಲು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಬಯಸಿದೆ. ಉತ್ತರಪ್ರದೇಶ ಸೇರಿ ಕೆಲವು ರಾಜ್ಯಗಳು ಇತ್ತೀಚೆಗೆ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದಿವೆ. ರಾಜ್ಯದಲ್ಲೂ ಅದೇ ರೀತಿಯಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡಿದರೆ, ಹೆಚ್ಚು ಬಂಡವಾಳ ಬರಬಹುದು ಎಂದು ಸರ್ಕಾರದ ಲೆಕ್ಕಾಚಾರ.