ಯಡಿಯೂರಪ್ಪ ಅವರು ವರಿಷ್ಠರನ್ನು ಭೇಟಿ ಮಾಡಲು ದೆಹಲಿಗೆ ಬರುವಾಗ ಹಿಂದಿ ಭಾಷೆ ಬಲ್ಲವರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜಗದೀಶ ಶೆಟ್ಟರ್ ಅವರೊಂದಿಗೆ ಬರುವ ಪರಿಪಾಠ ಇಟ್ಟುಕೊಂಡಿದ್ದರು. ಆದರೆ, ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಪುತ್ರರಾದ ವಿಜಯೇಂದ್ರ ಮತ್ತು ರಾಘವೇಂದ್ರ ಅವರೊಂದಿಗೆ ನಡ್ಡಾ ಅವರನ್ನು ಭೇಟಿ ಮಾಡಿ 3 ನಿಮಿಷ ಕಾಲ ಮಾತುಕತೆ ನಡೆಸಿದರಾದರೂ ಯಾವುದೇ ರೀತಿಯ ಚರ್ಚೆಗೆ ಅವಕಾಶ ದೊರೆಯಲಿಲ್ಲ.