ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ಸಂಜೆ 6ಕ್ಕೆ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಬನಶಂಕರಿ ದೇವಸ್ಥಾನದಿಂದ ಒಂದು ಕಿ.ಮೀ. ದೂರದ ವರೆಗೆ ಈ ರೋಡ್ ಶೋ ನಡೆಯಲಿದ್ದು, ಸುಮಾರು 10 ಸಾವಿರ ಮಂದಿ ಭಾಗಿಯಾಗಲಿದ್ದಾರೆ. ಇದರಿಂದಾಗಿ ನಗರದಲ್ಲಿ ಬಿಜೆಪಿ ಪರ ಅಲೆ ಇನ್ನಷ್ಟು ಹೆಚ್ಚಾಗಲಿದ್ದು, ಕಾರ್ಯಕರ್ತರಲ್ಲಿ ಹುರುಪು ಜಾಸ್ತಿಯಾಗಲಿದೆ ಎಂದು ಶಾಸಕ ಆರ್.ಅಶೋಕ್ ತಿಳಿಸಿದ್ದಾರೆ.
ತೇಜಸ್ವಿನಿ ಭಾಗಿ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ನಿರಾಕರಿಸುವ ಬಗ್ಗೆ ಸೌಜನ್ಯಕ್ಕೂ ಮಾಹಿತಿ ನೀಡದ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿರುವ ತೇಜಸ್ವಿನಿ ಅನಂತಕುಮಾರ್ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.