ಇದೇ 26ರಂದು ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೇಂದ್ರ ಸರ್ಕಾರದ ಫಲಾನುಭವಿಗಳು ಹಾಗೂ ಕಾರ್ಯಕರ್ತರು ಪ್ರತಿ ಬೂತ್ನಲ್ಲಿ ಒಂದೇ ಕಡೆ ಸೇರಿ ದೀಪೋತ್ಸವ ಕಾರ್ಯಕ್ರಮ ಆಚರಿಸಲಿದ್ದಾರೆ. ಈ ಕಾರ್ಯಕ್ರಮ ರಾತ್ರಿ 7 ಗಂಟೆಗೆ ನಡೆಯಲಿದ್ದು, ಎಲ್ಲ ಬೂತ್ಗಳಲ್ಲಿ ರಂಗೋಲಿ ಹಾಕಿ, ಕಮಲ ದೀಪ ಹಚ್ಚಲಿದ್ದಾರೆ. ಇದರಲ್ಲಿ 8 ಲಕ್ಷ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ರಾಜ್ಯ ಹಾಗೂ ಜಿಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ.