ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೂಲ್ಯ ದೇಶದ್ರೋಹಿಯಲ್ಲ: ವಕೀಲ ಎಸ್‌.ಮಾರೆಪ್ಪ

Last Updated 22 ಫೆಬ್ರುವರಿ 2020, 10:47 IST
ಅಕ್ಷರ ಗಾತ್ರ

ರಾಯಚೂರು: ‘ಅಮೂಲ್ಯ ಲಿಯೋನ್‌ ದೇಶದ್ರೋಹಿಯಲ್ಲ.ನಮಸ್ತೆ ಟ್ರಂಪ್ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ದೇಶದ್ರೊಹ ಮಾಡಿದ್ದಾರೆ. ತಮ್ಮ ದೇಶದ್ರೋಹ ಮುಚ್ವಿಕೊಳ್ಳಲು ಹೋರಾಟಗಾರರನ್ನು ಬಂಧಿಸುತ್ತಿದ್ದಾರೆ’ ಎಂದು ವಕೀಲ ಎಸ್‌.ಮಾರೆಪ್ಪ ಹೇಳಿದರು.

‘ಬೆಂಗಳೂರಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೂಲ್ಯ ಲಿಯೋನ್ ಹೇಳಿದ್ದರಲ್ಲಿ ತಪ್ಪಿಲ್ಲ. ಅವಳಿಗೆ ಪೂರ್ಣವಾಗಿ ಮಾತನಾಡಲು ಬಿಡಬೇಕಿತ್ತು. ಅಮೂಲ್ಯಳ ಮಾತುಗಳಿಗೆ ಸಂಪೂರ್ಣ ಬೆಂಬಲ ಇದೆ’ ಎಂದು ಸಮರ್ಥಿಸಿಕೊಂಡರು.

‘ಸಂಪೂರ್ಣ ಮಾತನಾಡಲು ಬಿಡದೆ ಕೇಸ್ ಹಾಕಿದ್ದಾರೆ. ಎಲ್ಲಾ ದೇಶಗಳಿಗೆ ಜಿಂದಾಬಾದ್ ಹೇಳುತ್ತಿದ್ದಳು. ಆದರೆ ಹೇಳಲು ಬಿಟ್ಟಿಲ್ಲ. ಹಿಂದೂಸ್ತಾನ್‌ ಜಿಂದಾಬಾದ್ ಎಂದು ಕೂಡಾ ಹೇಳಿದ್ದಾಳೆ. ಅಮೂಲ್ಯ ಪ್ರತಿಭಾವಂತ ಯುವತಿಯಾಗಿದ್ದು, ವೇದಿಕೆಯಲ್ಲಿದ್ದ ಮುಸ್ಲಿಂ ಮುಖಂಡರು ಹೆದರಿಕೊಂಡು ಮಾತನಾಡಲು ಅವಕಾಶ ಕೊಟ್ಟಿಲ್ಲ’ ಎಂದು ಹೇಳಿದರು.

ನಗರದ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಜನವರಿ 26 ರಿಂದ ಸಂವಿಧಾನ ಹಕ್ಕುಗಳ ರಕ್ಷಣಾ ವೇದಿಕೆಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದ್ದು,ಶಿವರಾತ್ರಿ ನಿಮಿತ್ತ ಏರ್ಪಡಿಸಿದ್ದ ಸರ್ವಜನಾಂಗದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT