ತಾಲ್ಲೂಕಿನ ಭುವನಹಳ್ಳಿಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ‘2018ರ ವಿಧಾನಸಭೆ ಚುನಾವಣೆಯಲ್ಲಿ ನನ್ನ ಮೇಲೆ ಕ್ಷೇತ್ರದ ಜನ ಭರವಸೆ ಇಟ್ಟು ಕಾಂಗ್ರೆಸ್ನಿಂದ ಗೆಲ್ಲಿಸಿದ್ದರು. ಆದರೆ, ಯಾವ ಪಕ್ಷಕ್ಕೂ ಬಹುಮತ ಬರಲಿಲ್ಲ. ಮೈತ್ರಿ ಸರ್ಕಾರದಲ್ಲಿ ಗೊಂದಲಗಳು ಏರ್ಪಟ್ಟಿದ್ದರಿಂದಾಗಿ ಕ್ಷೇತ್ರಕ್ಕೆ ಏನೂ ಮಾಡಲು ಆಗಲಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲವೊಮ್ಮೆ ಸ್ವಾರ್ಥಿಗಳಾಗಬೇಕಾಗುತ್ತದೆ’ ಎಂದು ಹೇಳಿದರು.