<p><strong>ಬೆಂಗಳೂರು:</strong>ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ3667.31 ಎಕರೆ ಭೂಮಿಯನ್ನುಜಿಂದಾಲ್ ಕಂಪನಿಗೆ ನೀಡುವುದನ್ನು ಆಕ್ಷೇಪಿಸಿವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರುಗೃಹ ಸಚಿವ ಎಂ ಬಿ.ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಈ ಕುರಿತುಜೂನ್ 27ರಂದು ಪತ್ರ ಬರೆದಿದ್ದು, ‘ಕಂಪನಿಗೆ ಭೂಮಿ ನೀಡುವುದರ ಸಾಧಕ-ಬಾಧಕ ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಿರುವುದನ್ನು ಸ್ವಾಗತಿಸುತ್ತೇನೆ. ಸರ್ಕಾರದ ನಿರ್ಧಾರ ಅಥವಾ ಕಾರ್ಖಾನೆಯ ವಿರುದ್ಧವಾಗಿ ಮಾತನಾಡುತ್ತಿಲ್ಲ. ನಮ್ಮ ಜಿಲ್ಲೆಯ ರೈತರು, ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈಆಕ್ಷೇಪಣೆಗಳನ್ನು ಸಲ್ಲಿಸಿದ್ದೇನೆ’ ಎಂದು ವಿವರಿಸಿದ್ದಾರೆ.</p>.<p>ತಾವು ರಾಜೀನಾಮೆ ನೀಡಲು ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಿರುವುದೂ ಒಂದು ಕಾರಣ ಎಂದು ಆನಂದ್ ಸಿಂಗ್ ಹೇಳಿದ್ದಾರೆ.</p>.<p>‘ಬಳ್ಳಾರಿ ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಜೆಎಸ್ಡಬ್ಲ್ಯು ತನ್ನ ಕೈಗಾರಿಕಾ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಲು ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಟಿಯ ಆಸೆ ತೋರಿಸಿದೆ. ಸಿಎಸ್ಆರ್ ನಿಧಿಯಿಂದ ಜಿಲ್ಲೆಯ ಅಭಿವೃದ್ಧಿಯಲ್ಲಿ ತಾವು ಸಹ ಭಾಗಿಯಾಗುತ್ತೇವೆ ಎಂದು ನಂಬಿಸಿ, ಸರ್ಕಾರದ ವತಿಯಿಂದ ಅನೇಕ ಸವಲತ್ತುಗಳನ್ನು ಪಡೆದುಕೊಂಡಿದೆ. ಈಗ ಈ ಕಂಪನಿ ಸರ್ಕಾರಿ ಭೂಮಿಯನ್ನು ತಮ್ಮ ಹೆಸರಿನಲ್ಲಿ ಕ್ರಯಕ್ಕೆ ಮಾಡಿಕೊಳ್ಳಲು ಹವಣಿಸುತ್ತಿದೆ. ಇದುವರೆಗೆ ಜಿಂದಾಲ್ ಕಂಪನಿ ಸುಮಾರು 11,000 ಎಕರೆಗಿಂತಲೂ ಹೆಚ್ಚು ಭೂಮಿಯನ್ನು ಸರ್ಕಾರದಿಂದ ಪಡೆದುಕೊಂಡಿದೆ. ಈ ಜಾಗದ ಪ್ರಸ್ತುತ ಸ್ಥಿತಿಗತಿಯನ್ನು ಸಮಿತಿ ಪರಿಶೀಲನೆ ಮಾಡಬೇಕು. ಅದೇ ರೀತಿ 11,000 ಎಕರೆಯಷ್ಟು ಬೃಹತ್ ಭೂಮಿಯನ್ನು ಪಡೆದ ಮೇಲೂ ಪುನಃ 3,667 ಎಕರೆ ಭೂಮಿಯ ಅವಶ್ಯಕತೆ ಏನಿದೆ ಎಂಬುದನ್ನು ಅರಿಯಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>’3,667 ಎಕರೆ ಭೂಮಿ ಈ 11,000 ಎಕರೆ ಭೂಮಿಯ ಭಾಗವಾಗಿದ್ದಲ್ಲಿ, ಈ ಭೂಮಿಯಲ್ಲಿ ಕಾರ್ಖಾನೆಯವರು ಈವರೆಗೂ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಒಂದು ವೇಳೆ 3,667 ಎಕರೆ ಭೂಮಿಯಲ್ಲಿ ಅಭಿವೃದ್ಧಿಯಾಗಿದ್ದರೆ ಅದನ್ನು ಶುದ್ಧ ಕ್ರಯಕ್ಕೆ ಪಡೆದುಕೊಳ್ಳುವ ಅನಿವಾರ್ಯತೆ ಏನು? ಲೀಸ್ನಲ್ಲೇ ಮುಂದುವರಿಸಬಹುದಲ್ಲವೇ? ಎಂದು ಪ್ರಶ್ನಿಸಿರುವ ಅವರು, ಯಾವುದೇ ಕಾರಣಕ್ಕೂ ಈ ಭೂಮಿಯನ್ನು ಶುದ್ಧ ಕ್ರಯಕ್ಕೆ ನೀಡದೆ ಲೀಸ್ ಅವಧಿಯಲ್ಲಿಯೇ ಮುಂದುವರಿಸಬೇಕು’ ಎಂದು ಬೇಡಿಕೆ ಇಟ್ಟಿದ್ದಾರೆ.</p>.<p>‘ಜಿಂದಾಲ್ ಕಂಪನಿಯವರು ಸರ್ಕಾರದಿಂದ ಪಡೆದ ಭೂಮಿಗಿಂತ ಹೆಚ್ಚು ಭೂಮಿಯನ್ನು ವಶಪಡಿಸಿಕೊಂಡಿದ್ದು, ಈ ಬಗ್ಗೆ ಒಂದುಸರ್ವೇ ಮಾಡಿಸಬೇಕು. ಈ ವಿಷಯದ ಬಗ್ಗೆಯೂ ಸಹ ಕಾಳಜಿ ವಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ಎಂದು ಪತ್ರದಲ್ಲಿಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ3667.31 ಎಕರೆ ಭೂಮಿಯನ್ನುಜಿಂದಾಲ್ ಕಂಪನಿಗೆ ನೀಡುವುದನ್ನು ಆಕ್ಷೇಪಿಸಿವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರುಗೃಹ ಸಚಿವ ಎಂ ಬಿ.ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಈ ಕುರಿತುಜೂನ್ 27ರಂದು ಪತ್ರ ಬರೆದಿದ್ದು, ‘ಕಂಪನಿಗೆ ಭೂಮಿ ನೀಡುವುದರ ಸಾಧಕ-ಬಾಧಕ ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಿರುವುದನ್ನು ಸ್ವಾಗತಿಸುತ್ತೇನೆ. ಸರ್ಕಾರದ ನಿರ್ಧಾರ ಅಥವಾ ಕಾರ್ಖಾನೆಯ ವಿರುದ್ಧವಾಗಿ ಮಾತನಾಡುತ್ತಿಲ್ಲ. ನಮ್ಮ ಜಿಲ್ಲೆಯ ರೈತರು, ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈಆಕ್ಷೇಪಣೆಗಳನ್ನು ಸಲ್ಲಿಸಿದ್ದೇನೆ’ ಎಂದು ವಿವರಿಸಿದ್ದಾರೆ.</p>.<p>ತಾವು ರಾಜೀನಾಮೆ ನೀಡಲು ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಿರುವುದೂ ಒಂದು ಕಾರಣ ಎಂದು ಆನಂದ್ ಸಿಂಗ್ ಹೇಳಿದ್ದಾರೆ.</p>.<p>‘ಬಳ್ಳಾರಿ ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಜೆಎಸ್ಡಬ್ಲ್ಯು ತನ್ನ ಕೈಗಾರಿಕಾ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಲು ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಟಿಯ ಆಸೆ ತೋರಿಸಿದೆ. ಸಿಎಸ್ಆರ್ ನಿಧಿಯಿಂದ ಜಿಲ್ಲೆಯ ಅಭಿವೃದ್ಧಿಯಲ್ಲಿ ತಾವು ಸಹ ಭಾಗಿಯಾಗುತ್ತೇವೆ ಎಂದು ನಂಬಿಸಿ, ಸರ್ಕಾರದ ವತಿಯಿಂದ ಅನೇಕ ಸವಲತ್ತುಗಳನ್ನು ಪಡೆದುಕೊಂಡಿದೆ. ಈಗ ಈ ಕಂಪನಿ ಸರ್ಕಾರಿ ಭೂಮಿಯನ್ನು ತಮ್ಮ ಹೆಸರಿನಲ್ಲಿ ಕ್ರಯಕ್ಕೆ ಮಾಡಿಕೊಳ್ಳಲು ಹವಣಿಸುತ್ತಿದೆ. ಇದುವರೆಗೆ ಜಿಂದಾಲ್ ಕಂಪನಿ ಸುಮಾರು 11,000 ಎಕರೆಗಿಂತಲೂ ಹೆಚ್ಚು ಭೂಮಿಯನ್ನು ಸರ್ಕಾರದಿಂದ ಪಡೆದುಕೊಂಡಿದೆ. ಈ ಜಾಗದ ಪ್ರಸ್ತುತ ಸ್ಥಿತಿಗತಿಯನ್ನು ಸಮಿತಿ ಪರಿಶೀಲನೆ ಮಾಡಬೇಕು. ಅದೇ ರೀತಿ 11,000 ಎಕರೆಯಷ್ಟು ಬೃಹತ್ ಭೂಮಿಯನ್ನು ಪಡೆದ ಮೇಲೂ ಪುನಃ 3,667 ಎಕರೆ ಭೂಮಿಯ ಅವಶ್ಯಕತೆ ಏನಿದೆ ಎಂಬುದನ್ನು ಅರಿಯಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>’3,667 ಎಕರೆ ಭೂಮಿ ಈ 11,000 ಎಕರೆ ಭೂಮಿಯ ಭಾಗವಾಗಿದ್ದಲ್ಲಿ, ಈ ಭೂಮಿಯಲ್ಲಿ ಕಾರ್ಖಾನೆಯವರು ಈವರೆಗೂ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಒಂದು ವೇಳೆ 3,667 ಎಕರೆ ಭೂಮಿಯಲ್ಲಿ ಅಭಿವೃದ್ಧಿಯಾಗಿದ್ದರೆ ಅದನ್ನು ಶುದ್ಧ ಕ್ರಯಕ್ಕೆ ಪಡೆದುಕೊಳ್ಳುವ ಅನಿವಾರ್ಯತೆ ಏನು? ಲೀಸ್ನಲ್ಲೇ ಮುಂದುವರಿಸಬಹುದಲ್ಲವೇ? ಎಂದು ಪ್ರಶ್ನಿಸಿರುವ ಅವರು, ಯಾವುದೇ ಕಾರಣಕ್ಕೂ ಈ ಭೂಮಿಯನ್ನು ಶುದ್ಧ ಕ್ರಯಕ್ಕೆ ನೀಡದೆ ಲೀಸ್ ಅವಧಿಯಲ್ಲಿಯೇ ಮುಂದುವರಿಸಬೇಕು’ ಎಂದು ಬೇಡಿಕೆ ಇಟ್ಟಿದ್ದಾರೆ.</p>.<p>‘ಜಿಂದಾಲ್ ಕಂಪನಿಯವರು ಸರ್ಕಾರದಿಂದ ಪಡೆದ ಭೂಮಿಗಿಂತ ಹೆಚ್ಚು ಭೂಮಿಯನ್ನು ವಶಪಡಿಸಿಕೊಂಡಿದ್ದು, ಈ ಬಗ್ಗೆ ಒಂದುಸರ್ವೇ ಮಾಡಿಸಬೇಕು. ಈ ವಿಷಯದ ಬಗ್ಗೆಯೂ ಸಹ ಕಾಳಜಿ ವಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ಎಂದು ಪತ್ರದಲ್ಲಿಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>