<p><strong>ಬೆಳಗಾವಿ:</strong> ‘ಹಲೋ... ಏನ್ರಿ...ರಾಜೀನಾಮೆ ಕೊಡ್ತೀರಾ?’</p>.<p>ಶಾಸಕ ಮಹೇಶ ಕುಮಠಳ್ಳಿ ಅವರಿಗೆ ಫೋನ್ ಕರೆ ಮಾಡಿದ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರು ಕೇಳಿದ ಪ್ರಶ್ನೆ ಇದು. ಇದಕ್ಕೆ ಉತ್ತರಿಸಿದ ಕುಮಠಳ್ಳಿ ‘ರಾಜೀನಾಮೆ ನೀಡುವುದಿಲ್ಲ. ನಾನೆಲ್ಲೂ ಹೋಗಿಲ್ಲ. ಬೆಂಗಳೂರಿನಲ್ಲಿ ಇದ್ದೇನೆ’ ಎಂದರು.</p>.<p>ನೋಡಿ, ‘ನಿಮ್ಮ ಏಳು ಜನರ ಪಟ್ಟಿಯಲ್ಲಿ ಒಬ್ಬ ಶಾಸಕರು ಕಮ್ಮಿಯಾದರು’ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಾಸ್ಯ ಚಟಾಕಿ ಸಿಡಿಸಿದ ಸತೀಶ ‘ಆಪರೇಷನ್ ಕಮಲ ಮಾಡಿದ್ರೆ ನಾವು ರಿವರ್ಸ್ ಆಪರೇಷನ್ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಇದಕ್ಕೂ ಮೊದಲು ಶಾಸಕ ಆನಂದ್ ಸಿಂಗ್ ರಾಜೀನಾಮೆ ಕುರಿತು ಮಾತನಾಡಿದ ಸತೀಶ ಜಾರಕಿಹೊಳಿ,‘ಶಾಸಕ ಸ್ಥಾನಕ್ಕೆ ಆನಂದ ಸಿಂಗ್ ರಾಜೀನಾಮೆ ನೀಡಿರುವುದರಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ’ ಎಂದು ಹೇಳಿದರು.</p>.<p>‘ಅತೃಪ್ತರ ಗುಂಪಿಗೂ ಆನಂದ ಸಿಂಗ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಅವರು ಜಿಂದಾಲ್ ವಿಷಯದಲ್ಲಿ ರಾಜೀನಾಮೆ ನೀಡಿರಬಹುದು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ನೀಡಿರುವ ರಾಜೀನಾಮೆ ವಾಪಸ್ ಪಡೆಯಲೂ ಬರುತ್ತದೆ. ಇದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಯಾರೇ ರಾಜೀನಾಮೆ ಕೊಟ್ಟರೂ ಸರ್ಕಾರದ ಮೇಲೆ ಏನೂ ಪರಿಣಾಮ ಉಂಟಾಗಲ್ಲ’ ಎಂದರು.</p>.<p>‘ಹಿಂದೆ ಕೂಡ ಹತ್ತು ಜನರು ಮುಂಬೈಗೆ ಹೋಗಿ ಬಂದರೂ ಸರ್ಕಾರಕ್ಕೆ ಏನೂ ಮಾಡಲು ಆಗಲಿಲ್ಲ’ ಎಂದು ಟಾಂಗ್ ನೀಡಿದರು.</p>.<p>‘ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಮೆರಿಕ ಪ್ರವಾಸವು ಪೂರ್ವನಿಯೋಜಿತ ಕಾರ್ಯಕ್ರಮವಾಗಿದೆ. ರಾಜೀನಾಮೆಗೂ ಪ್ರವಾಸಕ್ಕೂ ಯಾವುದೇ ಸಂಬಂಧ ಇಲ್ಲ. ಅಥಣಿ ಶಾಸಕ ಮಹೇಶ ಕುಮಠಳ್ಳಿ ಸೇರಿದಂತೆ ಬೇರಾರೂ ರಾಜೀನಾಮೆ ನೀಡುವುದಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಹಲೋ... ಏನ್ರಿ...ರಾಜೀನಾಮೆ ಕೊಡ್ತೀರಾ?’</p>.<p>ಶಾಸಕ ಮಹೇಶ ಕುಮಠಳ್ಳಿ ಅವರಿಗೆ ಫೋನ್ ಕರೆ ಮಾಡಿದ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರು ಕೇಳಿದ ಪ್ರಶ್ನೆ ಇದು. ಇದಕ್ಕೆ ಉತ್ತರಿಸಿದ ಕುಮಠಳ್ಳಿ ‘ರಾಜೀನಾಮೆ ನೀಡುವುದಿಲ್ಲ. ನಾನೆಲ್ಲೂ ಹೋಗಿಲ್ಲ. ಬೆಂಗಳೂರಿನಲ್ಲಿ ಇದ್ದೇನೆ’ ಎಂದರು.</p>.<p>ನೋಡಿ, ‘ನಿಮ್ಮ ಏಳು ಜನರ ಪಟ್ಟಿಯಲ್ಲಿ ಒಬ್ಬ ಶಾಸಕರು ಕಮ್ಮಿಯಾದರು’ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಾಸ್ಯ ಚಟಾಕಿ ಸಿಡಿಸಿದ ಸತೀಶ ‘ಆಪರೇಷನ್ ಕಮಲ ಮಾಡಿದ್ರೆ ನಾವು ರಿವರ್ಸ್ ಆಪರೇಷನ್ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಇದಕ್ಕೂ ಮೊದಲು ಶಾಸಕ ಆನಂದ್ ಸಿಂಗ್ ರಾಜೀನಾಮೆ ಕುರಿತು ಮಾತನಾಡಿದ ಸತೀಶ ಜಾರಕಿಹೊಳಿ,‘ಶಾಸಕ ಸ್ಥಾನಕ್ಕೆ ಆನಂದ ಸಿಂಗ್ ರಾಜೀನಾಮೆ ನೀಡಿರುವುದರಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ’ ಎಂದು ಹೇಳಿದರು.</p>.<p>‘ಅತೃಪ್ತರ ಗುಂಪಿಗೂ ಆನಂದ ಸಿಂಗ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಅವರು ಜಿಂದಾಲ್ ವಿಷಯದಲ್ಲಿ ರಾಜೀನಾಮೆ ನೀಡಿರಬಹುದು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ನೀಡಿರುವ ರಾಜೀನಾಮೆ ವಾಪಸ್ ಪಡೆಯಲೂ ಬರುತ್ತದೆ. ಇದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಯಾರೇ ರಾಜೀನಾಮೆ ಕೊಟ್ಟರೂ ಸರ್ಕಾರದ ಮೇಲೆ ಏನೂ ಪರಿಣಾಮ ಉಂಟಾಗಲ್ಲ’ ಎಂದರು.</p>.<p>‘ಹಿಂದೆ ಕೂಡ ಹತ್ತು ಜನರು ಮುಂಬೈಗೆ ಹೋಗಿ ಬಂದರೂ ಸರ್ಕಾರಕ್ಕೆ ಏನೂ ಮಾಡಲು ಆಗಲಿಲ್ಲ’ ಎಂದು ಟಾಂಗ್ ನೀಡಿದರು.</p>.<p>‘ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಮೆರಿಕ ಪ್ರವಾಸವು ಪೂರ್ವನಿಯೋಜಿತ ಕಾರ್ಯಕ್ರಮವಾಗಿದೆ. ರಾಜೀನಾಮೆಗೂ ಪ್ರವಾಸಕ್ಕೂ ಯಾವುದೇ ಸಂಬಂಧ ಇಲ್ಲ. ಅಥಣಿ ಶಾಸಕ ಮಹೇಶ ಕುಮಠಳ್ಳಿ ಸೇರಿದಂತೆ ಬೇರಾರೂ ರಾಜೀನಾಮೆ ನೀಡುವುದಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>