ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕಾರ್ಯಕರ್ತರ ಜತೆ ಮಾತನಾಡಿದ ಅವರು, ‘ನಾವು ಜನರ ಮಧ್ಯವೇ ಇದ್ದೇವೆ. ನಿಮ್ಮ ಮಗ ನಿಖಿಲ್ ಹಾಗೂ ನಮ್ಮ ಮಾಜಿ ಪ್ರಧಾನಿಯವರು ಎಲ್ಲಿದ್ದಾರೆ ಎಂದು ಹುಡುಕಿಕೊಂಡು ಬರಬೇಕು. ಮೇಲಿದ್ದವರು ಪಾತಾಳಕ್ಕೆ ಇಳಿಯುತ್ತಾರೆ, ಪಾತಾಳದಲ್ಲಿರುವವರು ಮತ್ತೆಲ್ಲೋ ಇರುತ್ತಾರೆ. ಇದು ಪ್ರಜಾಪ್ರಭುತ್ವದ ವೈಶಿಷ್ಟ್ಯ’ ಎಂದು ಅವರು ಹೇಳಿದರು.