ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಬತ್ತಳಿಕೆಯಲ್ಲಿರುವ ಕೊನೆಯ ಅಸ್ತ್ರ ಪ್ರಿಯಾಂಕಾ: ಅನಂತಕುಮಾರ ಹೆಗಡೆ

ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್‌ನ ಮಹಾಭಾರತ ಪೂರ್ಣಗೊಳ್ಳಲಿದೆ.
Last Updated 30 ಏಪ್ರಿಲ್ 2019, 16:46 IST
ಅಕ್ಷರ ಗಾತ್ರ

ಶಿರಸಿ:ಕಾಂಗ್ರೆಸ್ ಬತ್ತಳಿಕೆಯಲ್ಲಿ ಇರುವಕೊನೆಯ ಅಸ್ತ್ರ ಪ್ರಿಯಾಂಕಾ ಗಾಂಧಿ. ಪ್ರಿಯಾಂಕಾ, ರಾಹುಲ್ ಗಾಂಧಿಗಿಂತ ಪ್ರಭಾವಿಯಂತೆ. ಇಂದಿರಾಗಾಂಧಿ ಅವತಾರವಂತೆ ಎಂದು ವರ್ಣಿಸಲಾಗುತ್ತಿದೆ. ಅವಳ ಬಂಡವಾಳವೂ ಇನ್ನೇನು ಬಯಲಾಗಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಟೀಕಿಸಿದರು.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್‌ನ ಮಹಾಭಾರತ ಪೂರ್ಣಗೊಳ್ಳಲಿದೆ. ಕಾಂಗ್ರೆಸ್ ನೆಹರು ಕುಟುಂಬದ ಹೊರತಾಗಿ ಯಾರನ್ನೂ ಒಪ್ಪದು.ದೇಶದ ಎಲ್ಲ ವ್ಯವಸ್ಥೆಯಲ್ಲಿ ಅರ್ಬನ್ ನಕ್ಸಲರು ತುಂಬಿಕೊಂಡಿದ್ದಾರೆ.

ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಎಲ್ಲ ಕಡೆ ಕಾಂಗ್ರೆಸ್ ರಾಷ್ಟ್ರದ್ರೊಹಿಗಳನ್ನು ಇಟ್ಟಿದೆ. ಮಾಧ್ಯಮದಲ್ಲೂ ಅರ್ಬನ್ ನಕ್ಸಲರು ಇದ್ದಾರೆ.ಎಲ್ಲೂ ಇಲ್ಲದ ನನ್ನನ್ನು ಜನಪ್ರಿಯತೆಗೆ ತಂದವರು ಅವರೇ. ವಿವಾದಿತ ಹೇಳಿಕೆ ಎಂದು ಪ್ರಚಾರ ನೀಡಿದ್ದಕ್ಕೆ ಮಾಧ್ಯಮಗಳಿಗೆ ಧನ್ಯವಾದ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT