‘ಐದು ಶತಮಾನಗಳಿಂದ ರಾಮ ಮಂದಿರಕ್ಕಾಗಿ ಜೀವವನ್ನೇ ತ್ಯಾಗ ಮಾಡಿದ ಎಷ್ಟೋ ಭಕ್ತರಿಗೆ ಅನ್ಯಾಯವಾಗಿದೆ. ಸೂಕ್ತ ಸಮಯದಲ್ಲಿ ನ್ಯಾಯ ಒದಗಿಸದಿದ್ದರೆ, ಸಮಾಜದಲ್ಲಿ ಉಂಟಾಗುವ ಕ್ಷೋಭೆ ತಣಿಸಲು ಸರ್ಕಾರಕ್ಕೆ ಅನ್ಯಮಾರ್ಗ ಶೋಧಿಸುವ ಅನಿವಾರ್ಯತೆ ಎದುರಾಗುತ್ತದೆ. ನಾವೀಗ ಅಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಇದ್ದೇವೆ’ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.