ಮಹಾತ್ಮ ಗಾಂಧಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಹೇಳಿದ್ದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆಗೆ ಟ್ವೀಟ್ ಮಾಡಿದ್ದ ಅನಂತಕುಮಾರ್ ಬರಹಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಮೋದಿ ಅವರು ‘ಪ್ರಜ್ಞಾ ಸಿಂಗ್ ಅವರನ್ನು ಕ್ಷಮಿಸುವುದಿಲ್ಲ’ ಎಂದು ಹೇಳಿಕೆ ನೀಡಿದ್ದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ‘ನಾಯಕರ ಈ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ’ ಎಂದು ಹೇಳಿ ಪಕ್ಷಕ್ಕಾದ ಇರಿಸುಮುರಿಸನ್ನು ತಪ್ಪಿಸಿಕೊಂಡಿದ್ದರು.