ಪ್ರತಿಭಟನಾ ಸ್ಥಳಕ್ಕೆ ಸಂಜೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಗೂ ನಿರ್ದೇಶಕ ಕೆ.ಎ. ದಯಾನಂದ, ‘ಕೆಲವೇ ದಿನಗಳಲ್ಲಿ ಸಚಿವರ ಸಮ್ಮುಖದಲ್ಲಿ ಸಭೆ ಕರೆಯಲಾಗುವುದು. ಮುಖಂಡರನ್ನೂ ಆಹ್ವಾನಿಸಲಾಗುವುದು’ ಎಂದರು. ಅದಕ್ಕೆ ಒಪ್ಪಿದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಪ್ರತಿಭಟನೆ ಕೈಬಿಟ್ಟರು.