ಧಾರವಾಡ ಆಕಾಶವಾಣಿಯಲ್ಲಿ ಸೇವೆ ಪ್ರಾರಂಭಿಸಿದ ಅನೀಲ ದೇಸಾಯಿ ಅವರು, ಕಳೆದ ಕೆಲ ವರ್ಷಗಳ ಹಿಂದೆ ಬಳ್ಳಾರಿಯ ಆಕಾಶವಾಣಿ ಕೇಂದ್ರಕ್ಕೆ ವರ್ಗಾವಣೆಗೊಂಡು ಅಲ್ಲಿಯೂ ಅತ್ಯಂತ ಯಶಸ್ವಿಯಿಂದ ಕೆಲಸ ನಿರ್ವಹಿಸುತ್ತ ಜನರ ಮನಸ್ಸು ಗೆದ್ದಿದ್ದರು. ನಗರ ಮಾತ್ರವಲ್ಲದೇ ವಿವಿಧೆಡೆ ನಡೆಯುವ ಸಂಗೀತ ಕಾರ್ಯಕ್ರಮ, ನಾಟಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಕಾರ್ಯ ನಿರ್ವಹಿಸುತ್ತ ಎಲ್ಲರ ಮನದಲ್ಲಿದ್ದರು. ಅಷ್ಟೇ ಅಲ್ಲದೇ ಧಾರವಾಡ ಸಾಹಿತ್ಯ ಸಂಭ್ರಮದಲ್ಲಿಯೂ ಸಹ ನಿರಂತರವಾಗಿ ಒಂದಿಲ್ಲೊಂದಿ ಘೋಷ್ಠಿಯನ್ನು ನಿರ್ದೇಶಿಸುತ್ತಲೇ ಬರುತ್ತಿದ್ದರು.