<p><strong>ಬೆಂಗಳೂರು:</strong> ‘ಅನ್ನಭಾಗ್ಯ’ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.</p>.<p>ಅನರ್ಹರನ್ನು ಪತ್ತೆ ಹಚ್ಚಿ ಪಟ್ಟಿಯಿಂದ ಕೈಬಿಡಲು ಶೀಘ್ರವೇ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರ ಪರಿಸ್ಥಿತಿ ಕುರಿತ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>1.12 ಕೋಟಿ ಕುಟುಂಬಗಳು ಯೋಜನೆಯ ಫಲಾನುಭವಿಗಳು. ಆದರೆ, ನಿಜವಾದ ಬಿಪಿಎಲ್ ಕುಟುಂಬಗಳಲ್ಲದೇ ಸುಸ್ಥಿತಿಯಲ್ಲಿರುವವರೂ ಸೇರಿಕೊಂಡಿದ್ದಾರೆ. ಇದರಿಂದ ದುರುಪಯೋಗ ಹೆಚ್ಚಾಗಿದೆ. ಈ ಕಾರಣಕ್ಕೆ ಸರ್ಕಾರ ಹೆಚ್ಚುವರಿಯಾಗಿ ಪ್ರತಿ ಕೆ.ಜಿ ಅಕ್ಕಿಗೆ ₹ 34 ಕೊಟ್ಟು ಖರೀದಿಸುತ್ತಿದೆ. ಕಡು ಬಡ ಕುಟುಂಬಗಳಿಗೆ ಮಾತ್ರದ ಇದರ ಪ್ರಯೋಜನ ಸಿಗಬೇಕು ಎಂದು ಯಡಿಯೂರಪ್ಪ ಹೇಳಿದರು.</p>.<p>ಇದರಿಂದ ಸುಮಾರು ₹2,500 ಕೋಟಿ ರೂ.ಗಳ ಹೊರೆ ತಪ್ಪಿಸಬಹುದಾಗಿದೆ ಎಂದರು.</p>.<p>ರಾಜ್ಯ ಕೆಲವು ಗೋದಾಮುಗಳಲ್ಲಿ ಒಂದೆರಡು ವರ್ಷಗಳಿಂದ ಅನ್ನ ಭಾಗ್ಯದ ಅಕ್ಕಿಯನ್ನು ದಾಸ್ತಾನಿಡಲಾಗಿದೆ. ಅಕ್ಕಿ ಹುಳು ಹಿಡಿದು ಹಾಳಾಗಿದೆ. ಇನ್ನು ಮುಂದೆ ಯಾವುದೇ ಜಿಲ್ಲೆಯಲ್ಲಿ ಅಕ್ಕಿಯನ್ನು ದಾಸ್ತಾನಿಟ್ಟುಕೊಂಡರೇ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.</p>.<p><strong>10 ದಿನಗಳಲ್ಲಿ ₹2 ಸಾವಿರ ಜಮೆ</strong></p>.<p>ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿ ರೈತರಿಗೆ ಕೇಂದ್ರ ನೀಡುವ ₹ 6 ಸಾವಿರ ಜತೆಗೆ ರಾಜ್ಯವೂ ₹ 4 ಸಾವಿರ ನೀಡಲಿದ್ದು, ಮೊದಲ ಕಂತಿನ ₹ 2 ಸಾವಿರವನ್ನು 10 ದಿನಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.</p>.<p>‘ಗಂಗಾಕಲ್ಯಾಣ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ನೀಡಲು ಆಧಿಕಾರಿಗಳು, ಸಿಬ್ಬಂದಿ ಸತಾಯಿಸಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ಮುಖ್ಯ ಕಾರ್ಯದರ್ಶಿ ತಿಂಗಳಿಗೆ ಒಮ್ಮೆ ಒಂದು ಜಿಲ್ಲೆಗೆ ಹೋಗಿ ಅಲ್ಲಿನ ಪರಿಸ್ಥಿತಿ ತಿಳಿದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಿಗೆ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು 15 ದಿನಗಳಿಗೊಮ್ಮೆ, ಕ್ಷೇತ್ರ ಭೇಟಿ ಮಾಡಬೇಕು’ ಎಂದು ಯಡಿಯೂರಪ್ಪ ಹೇಳಿದರು.</p>.<p><strong>ಅಧಿಕಾರಿಗಳಿಗೆ ಚಾಟಿ</strong></p>.<p>‘ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಕರ್ತವ್ಯದಲ್ಲಿ ಕಡ್ಡಾಯವಾಗಿ ಇರಲೇಬೇಕು. ಜನರ ಸೇವೆಗೆ ಸದಾ ಸಿದ್ಧವಾಗಿರಬೇಕು, ಸಭೆ, ಸಮಾರಂಭಗಳನ್ನು ಸಹ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಆರಂಭಿಸಬೇಕು’ ಎಂದು ಯಡಿಯೂರಪ್ಪ ಕಟ್ಟಪ್ಪಣೆ ಮಾಡಿದರು.</p>.<p>ವರ್ಗಾವಣೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮಂತ್ರಿ ಮಂಡಲ ರಚನೆ ಆಗುವವರೆಗೆ ಮುಖ್ಯಮಂತ್ರಿ ಏಕಾಂಗಿಯಾಗಿ ಕೆಲಸ ಮಾಡಲು ಅಧಿಕಾರವಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>* ಅಧಿಕಾರಿಗಳು ತಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡುತ್ತಿದ್ದರೆ, ಶಾಸಕರಿಂದ ಬರುವ ಯಾವುದೇ ಒತ್ತಡಗಳಿಗೂ ಸೊಪ್ಪು ಹಾಕುವುದಿಲ್ಲ</p>.<p>–<strong>ಬಿ.ಎಸ್.ಯಡಿಯೂರಪ್ಪ,</strong>ಮುಖ್ಯಮಂತ್ರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅನ್ನಭಾಗ್ಯ’ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.</p>.<p>ಅನರ್ಹರನ್ನು ಪತ್ತೆ ಹಚ್ಚಿ ಪಟ್ಟಿಯಿಂದ ಕೈಬಿಡಲು ಶೀಘ್ರವೇ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರ ಪರಿಸ್ಥಿತಿ ಕುರಿತ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.</p>.<p>1.12 ಕೋಟಿ ಕುಟುಂಬಗಳು ಯೋಜನೆಯ ಫಲಾನುಭವಿಗಳು. ಆದರೆ, ನಿಜವಾದ ಬಿಪಿಎಲ್ ಕುಟುಂಬಗಳಲ್ಲದೇ ಸುಸ್ಥಿತಿಯಲ್ಲಿರುವವರೂ ಸೇರಿಕೊಂಡಿದ್ದಾರೆ. ಇದರಿಂದ ದುರುಪಯೋಗ ಹೆಚ್ಚಾಗಿದೆ. ಈ ಕಾರಣಕ್ಕೆ ಸರ್ಕಾರ ಹೆಚ್ಚುವರಿಯಾಗಿ ಪ್ರತಿ ಕೆ.ಜಿ ಅಕ್ಕಿಗೆ ₹ 34 ಕೊಟ್ಟು ಖರೀದಿಸುತ್ತಿದೆ. ಕಡು ಬಡ ಕುಟುಂಬಗಳಿಗೆ ಮಾತ್ರದ ಇದರ ಪ್ರಯೋಜನ ಸಿಗಬೇಕು ಎಂದು ಯಡಿಯೂರಪ್ಪ ಹೇಳಿದರು.</p>.<p>ಇದರಿಂದ ಸುಮಾರು ₹2,500 ಕೋಟಿ ರೂ.ಗಳ ಹೊರೆ ತಪ್ಪಿಸಬಹುದಾಗಿದೆ ಎಂದರು.</p>.<p>ರಾಜ್ಯ ಕೆಲವು ಗೋದಾಮುಗಳಲ್ಲಿ ಒಂದೆರಡು ವರ್ಷಗಳಿಂದ ಅನ್ನ ಭಾಗ್ಯದ ಅಕ್ಕಿಯನ್ನು ದಾಸ್ತಾನಿಡಲಾಗಿದೆ. ಅಕ್ಕಿ ಹುಳು ಹಿಡಿದು ಹಾಳಾಗಿದೆ. ಇನ್ನು ಮುಂದೆ ಯಾವುದೇ ಜಿಲ್ಲೆಯಲ್ಲಿ ಅಕ್ಕಿಯನ್ನು ದಾಸ್ತಾನಿಟ್ಟುಕೊಂಡರೇ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.</p>.<p><strong>10 ದಿನಗಳಲ್ಲಿ ₹2 ಸಾವಿರ ಜಮೆ</strong></p>.<p>ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿ ರೈತರಿಗೆ ಕೇಂದ್ರ ನೀಡುವ ₹ 6 ಸಾವಿರ ಜತೆಗೆ ರಾಜ್ಯವೂ ₹ 4 ಸಾವಿರ ನೀಡಲಿದ್ದು, ಮೊದಲ ಕಂತಿನ ₹ 2 ಸಾವಿರವನ್ನು 10 ದಿನಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.</p>.<p>‘ಗಂಗಾಕಲ್ಯಾಣ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ನೀಡಲು ಆಧಿಕಾರಿಗಳು, ಸಿಬ್ಬಂದಿ ಸತಾಯಿಸಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ಮುಖ್ಯ ಕಾರ್ಯದರ್ಶಿ ತಿಂಗಳಿಗೆ ಒಮ್ಮೆ ಒಂದು ಜಿಲ್ಲೆಗೆ ಹೋಗಿ ಅಲ್ಲಿನ ಪರಿಸ್ಥಿತಿ ತಿಳಿದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಿಗೆ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು 15 ದಿನಗಳಿಗೊಮ್ಮೆ, ಕ್ಷೇತ್ರ ಭೇಟಿ ಮಾಡಬೇಕು’ ಎಂದು ಯಡಿಯೂರಪ್ಪ ಹೇಳಿದರು.</p>.<p><strong>ಅಧಿಕಾರಿಗಳಿಗೆ ಚಾಟಿ</strong></p>.<p>‘ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಕರ್ತವ್ಯದಲ್ಲಿ ಕಡ್ಡಾಯವಾಗಿ ಇರಲೇಬೇಕು. ಜನರ ಸೇವೆಗೆ ಸದಾ ಸಿದ್ಧವಾಗಿರಬೇಕು, ಸಭೆ, ಸಮಾರಂಭಗಳನ್ನು ಸಹ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಆರಂಭಿಸಬೇಕು’ ಎಂದು ಯಡಿಯೂರಪ್ಪ ಕಟ್ಟಪ್ಪಣೆ ಮಾಡಿದರು.</p>.<p>ವರ್ಗಾವಣೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮಂತ್ರಿ ಮಂಡಲ ರಚನೆ ಆಗುವವರೆಗೆ ಮುಖ್ಯಮಂತ್ರಿ ಏಕಾಂಗಿಯಾಗಿ ಕೆಲಸ ಮಾಡಲು ಅಧಿಕಾರವಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>* ಅಧಿಕಾರಿಗಳು ತಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡುತ್ತಿದ್ದರೆ, ಶಾಸಕರಿಂದ ಬರುವ ಯಾವುದೇ ಒತ್ತಡಗಳಿಗೂ ಸೊಪ್ಪು ಹಾಕುವುದಿಲ್ಲ</p>.<p>–<strong>ಬಿ.ಎಸ್.ಯಡಿಯೂರಪ್ಪ,</strong>ಮುಖ್ಯಮಂತ್ರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>