<p><strong>ಬೆಂಗಳೂರು:</strong> ‘ಅನ್ನಭಾಗ್ಯ’ ಯೋಜನೆಯಡಿ ಆದ್ಯತಾ ಪಟ್ಟಿಯಲ್ಲಿರುವ ಕುಟುಂಬಗಳ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯನಿಗೆ ಹಂಚಿಕೆ ಮಾಡುತ್ತಿದ್ದ ಅಕ್ಕಿ ಪ್ರಮಾಣ ಏಪ್ರಿಲ್ ತಿಂಗಳಿನಿಂದ 7 ಕೆ.ಜಿಯಿಂದ 5 ಕೆ.ಜಿಗೆ ಇಳಿಕೆ ಆಗಲಿದೆ. ಆದರೆ, ಪ್ರತಿ ಕಾರ್ಡ್ಗೆ ತಲಾ 2 ಕೆ.ಜಿ ಗೋಧಿ ಉಚಿತವಾಗಿ ಸಿಗಲಿದೆ.</p>.<p>ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಆಹಾರ ಇಲಾಖೆಗೆ ಮೀಸಲಿಟ್ಟ ಅನುದಾನದಲ್ಲಿ ರಾಜ್ಯ ಸರ್ಕಾರ ₹ 1,234 ಕೋಟಿ ಕಡಿತ ಮಾಡಿದೆ. ಹೀಗಾಗಿ, ಅನ್ನಭಾಗ್ಯದ ಅಕ್ಕಿ ಪ್ರಮಾಣ ಕಡಿತ ಆಗಲಿದೆ.</p>.<p>ಇಲಾಖೆಗೆ ಹಿಂದಿನ (2019–20) ಸಾಲಿನಲ್ಲಿ ₹ 3,900 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ, 2020–21ನೇ ಸಾಲಿನಲ್ಲಿ ₹ 2,666 ಕೋಟಿ ಮಾತ್ರ ನಿಗದಿಪಡಿಸಲಾಗಿದೆ.</p>.<p>‘ಅನ್ನಭಾಗ್ಯ’ ಯೋಜನೆ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಮೈತ್ರಿ ಸರ್ಕಾರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅಕ್ಕಿ ಕಡಿತ ಮಾಡುವ ಪ್ರಸ್ತಾವ ಮುಂದಿಟ್ಟಿದ್ದಾಗ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಹೀಗಾಗಿ, ಅಕ್ಕಿ ಪ್ರಮಾಣವನ್ನು ಯಥಾಸ್ಥಿತಿ ಮುಂದುವರಿಸಲಾಗಿತ್ತು.</p>.<p>ಇದೀಗ, ಬಿಜೆಪಿ ಸರ್ಕಾರ ಅಕ್ಕಿ ಪ್ರಮಾಣ ಕಡಿತಗೊಳಿಸಿರುವುದು ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅನ್ನಭಾಗ್ಯ’ ಯೋಜನೆಯಡಿ ಆದ್ಯತಾ ಪಟ್ಟಿಯಲ್ಲಿರುವ ಕುಟುಂಬಗಳ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯನಿಗೆ ಹಂಚಿಕೆ ಮಾಡುತ್ತಿದ್ದ ಅಕ್ಕಿ ಪ್ರಮಾಣ ಏಪ್ರಿಲ್ ತಿಂಗಳಿನಿಂದ 7 ಕೆ.ಜಿಯಿಂದ 5 ಕೆ.ಜಿಗೆ ಇಳಿಕೆ ಆಗಲಿದೆ. ಆದರೆ, ಪ್ರತಿ ಕಾರ್ಡ್ಗೆ ತಲಾ 2 ಕೆ.ಜಿ ಗೋಧಿ ಉಚಿತವಾಗಿ ಸಿಗಲಿದೆ.</p>.<p>ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಆಹಾರ ಇಲಾಖೆಗೆ ಮೀಸಲಿಟ್ಟ ಅನುದಾನದಲ್ಲಿ ರಾಜ್ಯ ಸರ್ಕಾರ ₹ 1,234 ಕೋಟಿ ಕಡಿತ ಮಾಡಿದೆ. ಹೀಗಾಗಿ, ಅನ್ನಭಾಗ್ಯದ ಅಕ್ಕಿ ಪ್ರಮಾಣ ಕಡಿತ ಆಗಲಿದೆ.</p>.<p>ಇಲಾಖೆಗೆ ಹಿಂದಿನ (2019–20) ಸಾಲಿನಲ್ಲಿ ₹ 3,900 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ, 2020–21ನೇ ಸಾಲಿನಲ್ಲಿ ₹ 2,666 ಕೋಟಿ ಮಾತ್ರ ನಿಗದಿಪಡಿಸಲಾಗಿದೆ.</p>.<p>‘ಅನ್ನಭಾಗ್ಯ’ ಯೋಜನೆ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಮೈತ್ರಿ ಸರ್ಕಾರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅಕ್ಕಿ ಕಡಿತ ಮಾಡುವ ಪ್ರಸ್ತಾವ ಮುಂದಿಟ್ಟಿದ್ದಾಗ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಹೀಗಾಗಿ, ಅಕ್ಕಿ ಪ್ರಮಾಣವನ್ನು ಯಥಾಸ್ಥಿತಿ ಮುಂದುವರಿಸಲಾಗಿತ್ತು.</p>.<p>ಇದೀಗ, ಬಿಜೆಪಿ ಸರ್ಕಾರ ಅಕ್ಕಿ ಪ್ರಮಾಣ ಕಡಿತಗೊಳಿಸಿರುವುದು ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>