ರಾಜಕೀಯಕ್ಕೆ ಪ್ರವೇಶ: ‘ಹುದ್ದೆಗೆ ರಾಜೀನಾಮೆ ನೀಡುವ ಸಂಬಂಧ ಕಳೆದ ಆರು ತಿಂಗಳಿನಿಂದಲೇ ಅಣ್ಣಾಮಲೈ ಅವರು ಚಿಂತನೆ ನಡೆಸುತ್ತಿದ್ದರು. ರಾಜೀನಾಮೆ ನೀಡಿದ ಬಳಿಕ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಈಗಾಗಲೇ ತಮಿಳುನಾಡಿನ ಕೆಲ ರಾಜಕೀಯ ಮುಖಂಡರನ್ನು ಭೇಟಿಯಾಗಿ ಮಾತುಕತೆಯನ್ನೂ ನಡೆಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.