ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಪಾಠಿಗಳ ನಡುವಿನ ಗಲಾಟೆಯಲ್ಲಿ ವಿದ್ಯಾರ್ಥಿ ಸಾವು: ಮೂವರ ಬಂಧನ

Last Updated 2 ಫೆಬ್ರುವರಿ 2018, 7:42 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಕರವಾಲ್ ನಗರದ ಜೀವನ್‌ ಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, 14 ವರ್ಷದ ತುಷಾರ್‌ ಕುಮಾರ್‌ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. 

ಗುರವಾರ ಬೆಳಗ್ಗೆ ಶಾಲಾ ಶೌಚಾಲಯದಲ್ಲಿ ತುಷಾರ್‌ ಕುಮಾರ್‌ ಮೃತದೇಹ ಪತ್ತೆಯಾಗಿತ್ತು. ಇದನ್ನು ಕೊಲೆ ಎಂದು ವಿದ್ಯಾರ್ಥಿ ಪೋಷಕರು ಆರೋಪಿಸಿ ಶಾಲೆ ಮುಂದೆ ಪ್ರತಿಭಟನೆ ನಡೆಸಿದರು. 

‘ಮೃತ ವಿದ್ಯಾರ್ಥಿ ಇತರೆ ನಾಲ್ಕು ವಿದ್ಯಾರ್ಥಿಗಳ ಹೊಡೆದಾಟ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಸೆಕ್ಷನ್‌ 302, 304ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದೇವೆ’ ಎಂದು ಈಶಾನ್ಯ ವಿಭಾಗ ಪೊಲೀಸ್‌ ಉಪ ಆಯುಕ್ತ ಎ.ಕೆ ಸಿಂಗ್ಲಾ ಹೇಳಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು, ವಿದ್ಯಾರ್ಥಿ ಮೃತದೇಹದ ಮೇಲೆ ಯಾವುದೆ ಗಾಯದ ಗುರುತುಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದರು. ಆದರೆ, ಆದೇ ಶಾಲೆಯಲ್ಲಿ ಓದುತ್ತಿರುವ ಮೃತ ವಿದ್ಯಾರ್ಥಿಯ ಸಂಬಂಧಿ ರವಿ ‘ತುಷಾರ್‌ ಮೇಲೆ ಇತರೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದನ್ನು ನಾನು ನೋಡಿದೆ’ ಎಂದು ಹೇಳಿಕೆ ನೀಡಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT