ನಂತರ ಪ್ರತಿಭಟನಕಾರರು ಮೆರವಣಿಗೆಯಲ್ಲಿಜಗತ್ ವೃತ್ತಕ್ಕೆ ಬಂದು ಅಲ್ಲಿ ಪ್ರತಿಭಟನಾ ಸಭೆ ನಡೆಸಿದರು. ಮುಸ್ಲಿಮರು ಅಲ್ಲೇ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಂದ್ ಅಂಗವಾಗಿ ಸೂಪರ್ ಮಾರ್ಕೆಟ್, ಗಂಜ್, ಹುಮನಾಬಾದ್ ವರ್ತುಲ ರಸ್ತೆ ಹಾಗೂ ರೈಲು ನಿಲ್ದಾಣ ರಸ್ತೆಯಲ್ಲಿನ ಅಂಗಡಿ, ವಾಣಿಜ್ಯ ಮಳಿಗೆಗಳನ್ನು ಮುಚ್ಚಲಾಗಿತ್ತು.ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಿಪಿಐ, ಸಿಪಿಐ (ಎಂ) ಹಾಗೂ ಎಸ್ಯುಸಿಐ (ಸಿ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.