ಸಮಾಜದ ಮುಖಂಡ ಸೈಯ್ಯದ್ ಸೈಫುಲ್ಲಾ ಮಾತನಾಡಿ, ‘ಸ್ವಾತಂತ್ರ್ಯ ಸಂದರ್ಭಗಳಲ್ಲಿ ಈ ದೇಶಕ್ಕೆ ಅನೇಕ ಮಹನೀಯರು ಪ್ರಾಣ ತೆತ್ತಿದ್ದಾರೆ. ದೇಶ ಒಗ್ಗಟ್ಟಾಗಿ, ಶಾಂತಿಯುತವಾಗಿ ಇರಬೇಕು. ದೇಶದ ನಾಯಕರು ಸಮಸ್ಯೆಗಳನ್ನು ಬಗೆಹರಿಸುವ ಬದಲು ಸಮಸ್ಯೆ ಸೃಷ್ಟಿ ಮಾಡುತ್ತಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಹಿಂಪಡೆಯುವವರೆಗೂ ನಾವು ಸುಮ್ಮನಿರುವುದಿಲ್ಲ; ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಸಿದರು.